Dec 18, 2018, 12:04 PM IST
ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಡಿ ಕೆ ಶಿವಕುಮಾರ್ ಸರ್ವಪಕ್ಷ ಶಾಸಕರಿಗಾಗಿ ಇಂದು ಭೋಜನಕೂಟ ಆಯೋಜಿಸಿದ್ದಾರೆ. ಬೆಳಗಾವಿ ಉಸ್ತುವಾರಿ ಸಚಿವ ಜಾರಕೀಹೊಳಿಗೆ ಡಿಕೆಶಿ ಟಾಂಗ್ ನೀಡಿದ್ದಾರೆ. ಜೊತೆಗೆ ಸುವರ್ಣ ಸೌಧದಲ್ಲಿ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಗೆ ಸಿಎಂ ಕುಮಾರಸ್ವಾಮಿಯನ್ನು ಆಹ್ವಾನಿಸದೇ ಇರುವುದು ಕುತೂಹಲ ಕೆರಳಿಸಿದೆ.