ರೈತರಿಗೆ ಶೀಘ್ರವೇ ಹಣ ನೀಡಿ : ಸಿಎಂ

Published : Jul 07, 2018, 12:44 PM IST
ರೈತರಿಗೆ ಶೀಘ್ರವೇ ಹಣ ನೀಡಿ : ಸಿಎಂ

ಸಾರಾಂಶ

ರೈತರು ಸಂಕಷ್ಟದಲ್ಲಿರುವ ಕಾರಣ ಅವರಿಗೆ  ಶೀಘ್ರ ಹಣವನ್ನು ಪಾವತಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ  ಹೇಳಿದರು. ಸಕ್ಕರೆ ಕಾರ್ಖಾನೆ ಮಾಲಿಕರೊಂದಿಗೆ ಸಭೆ ನಡೆಸಿ ಈ ಸೂಚನೆ ನೀಡಿದರು.

ಬೆಂಗಳೂರು :  ಕಾರ್ಖಾನೆಯಲ್ಲಿ ದಾಸ್ತಾನಿರುವ ಸಕ್ಕರೆಯನ್ನು ಮಾರಾಟ ಮಾಡಿ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಮಾಡುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

ಕಬ್ಬು ಬೆಳೆಗಾರರ ಪಾವತಿ ಮಾಡದಿರಲು ಇರುವ ಸಮಸ್ಯೆಗಳ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಕಾರ್ಖಾನೆ ಮಾಲೀಕರ ಜತೆ ಸಮಾಲೋಚನೆ ನಡೆಸಿದರು. ಈ ವೇಳೆ ಕೇಂದ್ರದ ನೀತಿಯಿಂದಾಗಿ ಸಕ್ಕರೆ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಾರ್ಖಾನೆ ಮಾಲೀಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಕಾರ್ಖಾನೆಯಲ್ಲಿ ದಾಸ್ತಾನಿರುವ ಸಕ್ಕರೆಯನ್ನು ಮಾರಾಟ ಮಾಡಿ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಮಾಡಿ ಎಂದರು.

ಕೇಂದ್ರ ನೀತಿಯಿಂದಾಗಿ ಕಾರ್ಖಾನೆಯಲ್ಲಿನ ಸಕ್ಕರೆಯನ್ನು ಮಾರಾಟ ಮಾಡದಿರುವಂತೆ ಆಗಿದೆ. ಇದರಿಂದ ಹಣಕಾಸಿನ ಸಮಸ್ಯೆ ಎದುರಿಸುವಂತಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರದ ಗಮನ ಸೆಳೆಯುವಂತೆ ಮನವಿ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಈ ಬಗ್ಗೆ ಶೀಘ್ರದಲ್ಲಿಯೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ. ಆದರೆ, ರೈತರು ಸಂಕಷ್ಟದಲ್ಲಿರುವ ಕಾರಣ ಅವರಿಗೆ ಬಾಕಿ ಮೊತ್ತವನ್ನು ಪಾವತಿಸಿ ಎಂದು ಹೇಳಿದರು.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ 1,045 ಕೋಟಿ ರು.ನಷ್ಟುಎರಡು ಖಾಸಗಿ ಕಾರ್ಖಾನೆಗಳು, ಏಳು ಸಹಕಾರಿ ಸಂಸ್ಥೆಗಳು ಬಾಕಿ ಉಳಿಸಿಕೊಂಡಿವೆ. ಕಾರ್ಖಾನೆಗಳಿಂದ ಸುಮಾರು 200 ಕೋಟಿ ರು.ನಷ್ಟುವಿದ್ಯುತ್‌ ಬಿಲ್‌ ಬರಬೇಕಾಗಿದೆ. ಸದ್ಯಕ್ಕೆ ಅದನ್ನು ಬದಿಗಿರಿಸಲಾಗಿದೆ. ಮೊದಲು ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಂತೆ ತಿಳಿಸಲಾಗಿದೆ. ಸರ್ಕಾರವು ಅವರಿಗೆ ಬೇಕಾದ ಸಹಕಾರ ನೀಡಲು ಸಿದ್ಧವಿದ್ಧರೂ ರೈತರ ಬಾಕಿ ಮೊತ್ತವನ್ನು ಉಳಿಸಿಕೊಂಡಿರುವುದು ಸರಿಯಾದ ಕ್ರಮವಲ್ಲ. ತಕ್ಷಣ ಈ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

:  ಕಾರ್ಖಾನೆಯಲ್ಲಿ ದಾಸ್ತಾನಿರುವ ಸಕ್ಕರೆಯನ್ನು ಮಾರಾಟ ಮಾಡಿ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಮಾಡುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

ಕಬ್ಬು ಬೆಳೆಗಾರರ ಪಾವತಿ ಮಾಡದಿರಲು ಇರುವ ಸಮಸ್ಯೆಗಳ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಕಾರ್ಖಾನೆ ಮಾಲೀಕರ ಜತೆ ಸಮಾಲೋಚನೆ ನಡೆಸಿದರು. ಈ ವೇಳೆ ಕೇಂದ್ರದ ನೀತಿಯಿಂದಾಗಿ ಸಕ್ಕರೆ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಾರ್ಖಾನೆ ಮಾಲೀಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಕಾರ್ಖಾನೆಯಲ್ಲಿ ದಾಸ್ತಾನಿರುವ ಸಕ್ಕರೆಯನ್ನು ಮಾರಾಟ ಮಾಡಿ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಮಾಡಿ ಎಂದರು.

ಕೇಂದ್ರ ನೀತಿಯಿಂದಾಗಿ ಕಾರ್ಖಾನೆಯಲ್ಲಿನ ಸಕ್ಕರೆಯನ್ನು ಮಾರಾಟ ಮಾಡದಿರುವಂತೆ ಆಗಿದೆ. ಇದರಿಂದ ಹಣಕಾಸಿನ ಸಮಸ್ಯೆ ಎದುರಿಸುವಂತಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರದ ಗಮನ ಸೆಳೆಯುವಂತೆ ಮನವಿ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಈ ಬಗ್ಗೆ ಶೀಘ್ರದಲ್ಲಿಯೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ. ಆದರೆ, ರೈತರು ಸಂಕಷ್ಟದಲ್ಲಿರುವ ಕಾರಣ ಅವರಿಗೆ ಬಾಕಿ ಮೊತ್ತವನ್ನು ಪಾವತಿಸಿ ಎಂದು ಹೇಳಿದರು.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ 1,045 ಕೋಟಿ ರು.ನಷ್ಟುಎರಡು ಖಾಸಗಿ ಕಾರ್ಖಾನೆಗಳು, ಏಳು ಸಹಕಾರಿ ಸಂಸ್ಥೆಗಳು ಬಾಕಿ ಉಳಿಸಿಕೊಂಡಿವೆ. ಕಾರ್ಖಾನೆಗಳಿಂದ ಸುಮಾರು 200 ಕೋಟಿ ರು.ನಷ್ಟುವಿದ್ಯುತ್‌ ಬಿಲ್‌ ಬರಬೇಕಾಗಿದೆ. ಸದ್ಯಕ್ಕೆ ಅದನ್ನು ಬದಿಗಿರಿಸಲಾಗಿದೆ. ಮೊದಲು ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಂತೆ ತಿಳಿಸಲಾಗಿದೆ. ಸರ್ಕಾರವು ಅವರಿಗೆ ಬೇಕಾದ ಸಹಕಾರ ನೀಡಲು ಸಿದ್ಧವಿದ್ಧರೂ ರೈತರ ಬಾಕಿ ಮೊತ್ತವನ್ನು ಉಳಿಸಿಕೊಂಡಿರುವುದು ಸರಿಯಾದ ಕ್ರಮವಲ್ಲ. ತಕ್ಷಣ ಈ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ವರ್ಷದ ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ
ಮನೆ ಬಿಟ್ಟು ಬಂದ ರೈತ, 'ಸಾಯುತ್ತೇನೆ' ಎಂದಿದ್ದ: ಕೊನೆಗೆ ಪೊಲೀಸರು ಮಾಡಿದ್ದು ಕೇಳಿದ್ರೆ ಅಚ್ಚರಿ ಪಡ್ತೀರಾ!