
ಬೆಂಗಳೂರು: ಪೊಲೀಸ್ ಸೇವೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ರಾಜ್ಯ ಪೊಲೀಸ್ ಇಲಾಖೆ ಅಭಿವೃದ್ಧಿಪಡಿಸಿರುವ ಕೆಎಸ್ಪಿ ಆ್ಯಪ್ ಅನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆಗೊಳಿಸಿದ್ದಾರೆ. ಈ ಆ್ಯಪ್ನಲ್ಲಿ ಪೊಲೀಸ್ ಠಾಣೆಗಳು, ಆ ಠಾಣೆಗೆ ಸಂಬಂಧಪಟ್ಟ ಅಧಿಕಾರಿಗಳ ದೂರ ವಾಣಿ ಹಾಗೂ ಇ-ಮೇಲ್ ಸೇರಿ ಸಂಪೂರ್ಣ ವಿವರ ಲಭ್ಯವಿದೆ.
ಅಲ್ಲದೆ ತಮ್ಮ ಸಮೀಪದ ಠಾಣೆಗೆ ಜನರು ಹೇಗೆ ಹೋಗಬೇಕು, ಎಷ್ಟು ದೂರವಾಗುತ್ತದೆ ಎಂಬ ಮಾಹಿತಿ ಸಹ ಇರುತ್ತದೆ. ಜನರು ಅಪಾಯಕ್ಕೆ ಸಿಲುಕಿದರೆ ಎಸ್ಓಎಸ್ ಎಂಬ ಬಟನ್ ಒತ್ತಿದರೆ ತಕ್ಷಣವೇ ಪೊಲೀಸರು ರಕ್ಷಣೆಗೆ ಧಾವಿಸಲಿದ್ದಾರೆ. ಗೂಗಲ್ ಪ್ಲೇ ಸ್ಟೋರ್ನಲ್ಲಿ ಕೆಎಸ್ಪಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.