ತಂದೆ ಹಾಗೂ ಸಹೋದರನ ಬಗ್ಗೆ ಸಿಎಂ ಕುಮಾರಸ್ವಾಮಿ ಅಸಮಾಧಾನ

Published : Jun 11, 2018, 11:14 AM IST
ತಂದೆ ಹಾಗೂ ಸಹೋದರನ ಬಗ್ಗೆ ಸಿಎಂ ಕುಮಾರಸ್ವಾಮಿ ಅಸಮಾಧಾನ

ಸಾರಾಂಶ

  ಎಚ್.ಡಿ ದೇವೇಗೌಡ ಹಾಗೂ ಸಹೋದರ ರೇವಣ್ಣ ನಡೆಗೆ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಆಡಳಿತದಲ್ಲಿ ಇಬ್ಬರೂ ಕೂಡ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು :   ಎಚ್.ಡಿ ದೇವೇಗೌಡ ಹಾಗೂ ಸಹೋದರ ರೇವಣ್ಣ ನಡೆಗೆ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಆಡಳಿತದಲ್ಲಿ ಇಬ್ಬರೂ ಕೂಡ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ದೇವೇಗೌಡರ ನಿವಾಸಕ್ಕೆ ಪದೇಪದೇ ಅಧಿಕಾರಿಗಳು ಭೇಟಿ ನೀಡುತ್ತಿದ್ದು, ಅಧಿಕಾರಿಗಳನ್ನು ಮನೆಗೆ ಕರೆಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. 

ಮುಖ್ಯಮಂತ್ರಿ ಆಡಳಿತಾತ್ಮಕ  ವಿಚಾರದಲ್ಲಿ ದೇವೇಗೌಡರು ಹಾಗೂ ಸಹೋದರ ರೇವಣ್ಣ ಹಸ್ತಕ್ಷೇಪ ಮಾಡುತ್ತಿದ್ದು, ತಮಗೆ ಸಂಬಂಧ ವಿಲ್ಲದ ಸಭೆಗಳಲ್ಲಿ ರೇವಣ್ಣ ಪ್ರತ್ಯಕ್ಷವಾಗುತ್ತಿದ್ದಾರೆ ಎಂದು ಅಸಮಾಧಾನಗೊಂಡಿದ್ದಾರೆ.  

ಈ ವಿಚಾರವು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಲೆನೋವಾಗಿ ಪರಿಣಮಿಸಿದ್ದು, ತಮಗೆ ಮುಕ್ತವಾಗಿ ಆಡಳಿತ ನಡೆಸಲು ಬಿಡಿ ಎಂದು ಎಚ್ ಡಿಕೆ ಹೇಳಿದ್ದಾರೆ.  ಈ ಸಂಬಂಧ ದೇವೇಗೌಡ ಹಾಗೂ  ರೇವಣ್ಣಗೆ ನೇರವಾಗಿಯೇ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!
ಬಿಜೆಪಿಯವರೇನು ಸೂಟ್‌ಕೇಸ್‌ ಕೊಟ್ಟು ಕಳುಹಿಸುತ್ತಿದ್ರಾ?: ಸಚಿವ ಸಂತೋಷ್‌ ಲಾಡ್‌ ತಿರುಗೇಟು