ನಾಳೆ ಸಂಭವಿಸಲಿರುವ ಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕುಟುಂಬ ತಿರುಪತಿಗೆ ತೆರಳಿ ವಿಶೆಷ ಪೂಜೆ ಸಲ್ಲಿಸಲಿದ್ದಾರೆ.
ಬೆಂಗಳೂರು: ಶುಕ್ರವಾರದ ಚಂದ್ರಗ್ರಹಣದ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕುಟುಂಬ ಸಮೇತರಾಗಿ ಗುರುವಾರ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಲಿದ್ದಾರೆ.
ಗುರುವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ತೆರಳಲಿರುವ ಅವರು ಶುಕ್ರವಾರ ಬೆಳಗಿನ ಜಾವ ವಿಶೇಷ ಪೂಜೆ ನೆರವೇರಿಸಿದ ನಂತರ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿ ಸಂಭವಿಸಲಿರುವ ಗ್ರಹಣವು ತ್ಯಂತ ಹೆಚ್ಚು ಪರಿಣಾಮಕಾರಿಯಾಗಿದ್ದು ಈ ನಿಟ್ಟಿನಲ್ಲಿ ವಿವಿಧ ರಾಜಕಾರಣಿಗಳು ವಿಶೇಷ ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಇದೀಗ ಮಾಜಿ ಪ್ರಧಾನಿ ದೇವೇಗೌಡ ಅವರ ಕುಟುಂಬ ತಿರುಪತಿ ತಿಮ್ಮಪ್ಪನಿಗೆ ವಿಶ೪ಎಷ ಪೂಜೆಯನ್ನು ಸಲ್ಲಿಸಲು ತೆರಳುತ್ತಿದೆ.