ಕುಮಾರಸ್ವಾಮಿಯಿಂದ ರಾಜ್ಯದ ಮಠಗಳಿಗೆ ಬಂಪರ್ ಕೊಡುಗೆ!

Published : Jul 05, 2018, 02:19 PM IST
ಕುಮಾರಸ್ವಾಮಿಯಿಂದ ರಾಜ್ಯದ ಮಠಗಳಿಗೆ ಬಂಪರ್ ಕೊಡುಗೆ!

ಸಾರಾಂಶ

ರಾಜ್ಯದ ಮಠಗಳಿಗೆ ಬಂಪರ್​ ಕೊಡುಗೆ ಮಠ, ಸಂಘ-ಸಂಸ್ಥೆಗಳಿಗೆ ಒಟ್ಟು 25 ಕೋಟಿ ರೂ. ಅನುದಾನ ದಾಸೋಹ, ಶಿಕ್ಷಣ, ಸಾಮಾಜಿಕ ಸೇವೆ ಪರಿಗಣಿಸಿ ಅನುದಾನ

ಬೆಂಗಳೂರು(ಜು.5): ಸಿಎಂ ಕುಮಾರಸ್ವಾಮಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಮಠ, ಸಂಘ-ಸಂಸ್ಥೆಗಳಿಗೆ ತಲಾ 25 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ದಾಸೋಹ, ಶಿಕ್ಷಣ, ಸಾಮಾಜಿಕ ಸೇವೆ, ಅಭಿವೃದ್ಧಿಗೆ ಶ್ರಮಿಸುತ್ತಿರುವ ಮಠಗಳಿಗೆ ಭಾರೀ ಅನುದಾನ ನೀಡಲಾಗಿದೆ.

ಅದರಂತೆ ರಾಜ್ಯದ ಯಾವ್ಯಾವ ಮಠಗಳಿಗೆ ಅನುದಾನ ಘೋಷಣೆ ಮಾಡಿದೆ ಎಂಬುದನ್ನು ನೋಡುವುದಾದರೆ..ಭಗೀರಥ ಪೀಠ- ಮಧುರೆ (ಉಪ್ಪಾರ), ಮಾದಾರ ಚನ್ನಯ್ಯ ಗುರುಪೀಠ-ಚಿತ್ರದುರ್ಗ, ಶ್ರೀಸಿದ್ದರಾಮೇಶ್ವರ ಬೋವಿ ಗುರುಪೀಠ ಕಾಗಿನೆಲೆ, ಶ್ರೀವಾಲ್ಮೀಕಿ ಗುರುಪೀಠ, ಶ್ರೀ ಯಾದವ ಸಂಸ್ಥಾನ ಮಠ, ಚಿತ್ರದುರ್ಗ, ಶ್ರೀ ನಾರಾಯಣಗುರು ಸಂಸ್ಥಾನ ನಿಟ್ಟೂರು, ಶ್ರೀ ಮಡಿವಾಳ ಗುರುಪೀಠ, ಚಿತ್ರದುರ್ಗ, ಶ್ರೀದೇವಾಂಗ ಗುರುಪೀಠ, ಹಂಪಿ, ಹಡಪದ ಅಪ್ಪಣ್ಣ ಗುರುಪೀಠ, ತಂಗಡಗಿ, ಶ್ರೀ ಕಂಬಾರ ಗುರುಪೀಠ, ತೇಲಸಂಗ ಮಠಗಳಿಗೆ ಅನುದಾನ ಘೋಷಿಸಲಾಗಿದೆ.

ಇವಿಷ್ಟೇ ಅಲ್ಲದೇ ಶ್ರೀ ಛಲವಾದಿ ಪೀಠ, ಚನ್ನೇನಹಳ್ಳಿ, ಶ್ರೀ ವಿಜಯಸಂಗಮ ವಿದ್ಯಾಪೀಠ, ಹೊಸದುರ್ಗ, ಶ್ರೀ ಶಿವಶಕ್ತಿ ಪೀಠ, ಇರಕಲ್ ಮಸ್ಕಿ, ಹೇಮವೇಮ ಸಂದ್ಭೋದನ ಪೀಠ, ಎರಹೊಸಳ್ಳಿ, ರಾಜ್ಯ ಕುಂಬಾರ ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರು, ಗಂಗಾಮರಸ್ಥ/ಮೊಗವೀರ/ ಬೆಸ್ತ/ ಕೋಳಿ ಸಮಾಜ, ಸವಿತಾ ಸಮಾಜ ಬೆಂಗಳೂರು- ಪೀಠಗಳಿಗೂ 25 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫೇಸ್‌ಬುಕ್‌ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ