ಅನ್ನಭಾಗ್ಯಕ್ಕೆ ಕತ್ತರಿ ಹಾಕಿದ ಕುಮಾರಸ್ವಾಮಿ!

Published : Jul 05, 2018, 12:43 PM IST
ಅನ್ನಭಾಗ್ಯಕ್ಕೆ ಕತ್ತರಿ ಹಾಕಿದ ಕುಮಾರಸ್ವಾಮಿ!

ಸಾರಾಂಶ

ಸಿಎಂ ಕುಮರಸ್ವಾಮಿ ಮೊದಲ ಬಜೆಟ್ ವಿಧನಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಇಲಾಖಾವಾರು ಅನುಮೋದನೆಗಳ ವಿವರ ಮಾಹಿತಿ ಅನ್ನಭಾಗ್ಯಕ್ಕೆ ಕತ್ತರಿ ಹಾಕಿದ ಕುಮಾರಸ್ವಾಮಿ

ಬೆಂಗಳೂರು(ಜು.5): ಸಿಎಂ ಕುಮಾರಸ್ವಾಮಿ ವಿಧಾನಸಭೆಯಲ್ಲಿ ನೂತನ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸುತ್ತಿದ್ದು, ಇಲಾಖಾವಾರು ಅನುಮೋದನೆಗಳ ಕುರಿತು ಮಾಹಿತಿ ನೀಡುತ್ತಿದ್ದಾರೆ. ಈಗಾಗಳೇ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಆರ್ಥಿಕ ಮಾರ್ಗ ನಿರ್ಧರಿಸಲಾಗಿದೆ. ಅದರಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅನುಮೋದನೆ ಕುರಿತು ಸಿಎಂ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆ ಎಂದೇ ಹೇಳಲಾಗುತ್ತಿದ್ದ ಅನ್ನಭಾಗ್ಯ ಯೋಜನೆಗೆ ಸಿಎಂ ಕುಮಾರಸ್ವಾಮಿ ಕತ್ತರಿ ಹಾಕಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಈ ಮೊದಲು ನೀಡಲಾಗುತ್ತಿದ್ದ ೧೦ ಕೆಜಿ ಅಕ್ಕಿಯ ಬದಲಾಗಿ ೫ ಕೆಜಿಗೆ ಇಳಿಸಲಾಗಿದೆ.

ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತೀ ಬಿಪಿಎಲ್ ಪಡಿಒತರ ಚೀಟಿಗೆ 5 ಕೆಜಿ ಅಕ್ಕಿ ,1 ಕೆಜಿ ಪಾಮ್​ ಎಣ್ಣೆ, 1 ಕೆಜಿ ಉಪ್ಪು ಮತ್ತು 1ಕೆಜಿ ಸಕ್ಕರೆ ಉಚಿತವಾಗಿ ನೀಡಲಾಗುವುದು ಎಂದು ಕುಮಾರಸ್ವಾಮಿ ಘೋಷಿಸಿದ್ದಾರೆ. ಆದರೆ ಈ ಮೊದಲು ನೀಡುತ್ತಿದ್ದ ೧೦ ಕೆಜಿ ಅಕ್ಕಿನ್ನು ೫ ಕೆಜಿಗೆ ಇಳಿಸಿರುವುದು ಈ ಬಜೆಟ್ ನ ವಿಶೇಷ.

ಇನ್ನು ಆಹಾರ ಸುರಕ್ಷ ಮಾಹೆಯಡಿಯಲ್ಲಿ ವರ್ಷಕ್ಕೊಮ್ಮೆ ಪಡಿತರ ಚೀಟಿ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಪಡಿತರ ಚೀಟಿ ಅಕ್ರಮ ತಡೆಗಟ್ಟಲು ಇದು ಸಹಾಯಕಾರಿಯಾಗಲಿದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ
ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ