ಸಮಾಜ ಕಲ್ಯಾಣ ಇಲಾಖೆಗೆ ಸಿಎಂ ಕೊಟ್ಟಿದ್ದಿಷ್ಟು

Published : Jul 05, 2018, 12:23 PM ISTUpdated : Jul 05, 2018, 12:24 PM IST
ಸಮಾಜ ಕಲ್ಯಾಣ ಇಲಾಖೆಗೆ ಸಿಎಂ ಕೊಟ್ಟಿದ್ದಿಷ್ಟು

ಸಾರಾಂಶ

ಸಿಎಂ ಕುಮಾರಸ್ವಾಮಿ ಬಜೆಟ್ ಮಂಡನೆ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತಿರುವ ಸಿಎಂ ಇಲಾಖಾವಾರು ಅನುಮೋದನೆಗೆ ಸಿಎಂ ಅಸ್ತು ಸಮಾಜ ಕಲ್ಯಾಣ ಇಲಾಖೆಗೆ ಸಿಎಂ ಕೊಡುಗೆ ಏನು?   

ಬೆಂಗಳೂರು(ಜು.5): ವಿಧಾನಸಭೆಯಲ್ಲಿ ಕುಮಾರಸ್ವಾಮಿ ಭಾಷಣ ಮುಂದುವರೆದಿದ್ದು, ಇಲಾಖಾವಾರು ಅನುಮೋದನೆಗಳನ್ನು ಸಿಎಂ ಒಂದೊಂದಾಗಿ ಮಂಡಿಸುತ್ತಿದ್ದಾರೆ. ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯ ಅನುಮೋದನೆ ಪ್ರಸ್ತಾವನೆ ಮಾಡಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಗೆ ಸಿಎಂ ಕುಮಾರಸ್ವಾಮಿ ಹಲವು ಭರಪೂರ ಕೊಡುಗೆ ಘೋಷಿಸಿದ್ದಾರೆ.   

ಪ್ರಮುಖವಾಗಿ ಗಂಗಾ ಕಲ್ಯಾಣ ಯೋಜನೆಯಡಿ 2.50 ಲಕ್ಷದಿಂದ 4 ಲಕ್ಷ ರೂ. ಗೆ ಹೆಚ್ಚಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 5 ಸಾವಿರ ನಿರುದ್ಯೋಗಿ ಯುವಕ ಯುವತಿಯರಿಗೆ 10 ಲಕ್ಷ ರೂ ಆರ್ಥಿಕ ನೆರವು, ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಹಾಗು ತಾಂತ್ರಿಕ ಸಂಸ್ಥೆಗಳ ಸಹಯೋಗದಿಂದ 5 ಸಾವಿರ  ನೀರುದ್ಯೋಗಿಗಳಿಗೆ 15 ಕೋಟಿ ರೂ ವೆಚ್ಚದ ತರಬೇತಿಯನ್ನು ಸಿಎಂ ಘೋಷಿಸಿದ್ದಾರೆ.

ಅಲ್ಲದೇ ಹೈ. ಕ. ವ್ಯಾಪ್ತಿಯ ಕಲ್ಬುರ್ಗಿಯಲ್ಲಿ ಎಸ್‌ಸಿ, ಎಸ್‌ಟಿ ಪಧವಿದರರಿಗೆ ಯುಪಿಎಸ್​ಸಿ - ಕೆಪಿಎಸ್​ಸಿ ತರಬೇತಿ, ಪ್ರಗತಿ ಕಾಲೋನಿ ಯೋಜನೆಯಡಿ ಎಸ್‌ಸಿ, ಎಸ್‌ಟಿ ಮತ್ತು ತಾಂಡಾಗಳ ಅಭಿವೃದ್ಧಿಗೆ 1ರಿಂದ 5 ಕೋಟಿ ರೂ ಅನುದಾನವನ್ನು ಸಿಎಂ ನೀಡಿದ್ದಾರೆ.
 

ಇನ್ನು ಎಸ್‌ಸಿ, ಎಸ್‌ಟಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಎರಡು ಕೋಟಿ ವೆಚ್ಚದಲ್ಲಿ ತರಬೇತಿ, ಆಯ್ದ ಜಿಲ್ಲೆಗಳಲ್ಲಿ ಎಸ್‌ಸಿ, ಎಸ್‌ಟಿ ಮಾದರಿ ನವಗ್ರಾಮಗಳ ನಿರ್ಮಾಣ, ಎಸ್‌ಸಿ, ಎಸ್‌ಟಿ ಯುವಕರು ಮತ್ತು ನಿರುದ್ಯೋಗಿಗಳಿಗೆ ನೆರವಾಗಲು ಸ್ವಯಂ ಉದ್ಯೋಗ ತರಬೇತಿ ಕೇಂದ್ರಗಳ ಸ್ಥಾಪನೆಗೆ ಕುಮಾರಸ್ವಾಮಿ ಒಪ್ಪಿಗೆ ನೀಡಿದ್ದಾರೆ. 

ಭೂ ಒಡೆತನ ಯೋಜನೆಯಡಿ ಜಮೀನು ಪಡೆದ ರೈತ ಮಹಿಳೆಯರಿಗೆ ಕೊಳವೆ ಬಾವಿ ಮತ್ತು ಕೃಷಿ ಯಂತ್ರೋಪಕರಣ ವಿತರಣೆಗೆ ಗ್ರೀನ್ ಸಿಗ್ನಲ್ ಕೊಡಲಾಗಿದೆ. ಎಲ್ಲಾ ರೀತಿಯಲ್ಲೂ ಹಿಂದುಳಿದ ಶಿಳ್ಳೆಕ್ಯಾತ, ದೊಂಬಿದಾಸ , ಗೌಳಿ, ಹೆಳವ, ಶಿಕಾರಿಗಳು, ಹೂವಾಡಿಗ, ಕಾಂಚುಗಾರ, ಕಮ್ಮಾರ, ದರ್ಜಿ, ದೇವಾಡಿಗ, ಬುಡುಬುಡಿಕೆ, ಮುಂತಾದ ಸಮಾಜಗಳ ಅಭಿವೃದ್ಧಿಗೆ 10 ಕೋಟಿ ಅನುದಾನವನ್ನು ಮೀಸಲಿರಿಸುವುದಾಗಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
Dhurandhar Review: ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ Ranveer Singh ಸಿನಿಮಾ!