ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಅಸ್ತು!

First Published Jul 5, 2018, 1:57 PM IST
Highlights

ಬಡ ಬ್ರಾಹ್ಮಣರಿಗೂ ಆರ್ಥಿಕ ನೆರವು

ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಸ್ಥಾಪನೆಗೆ ನಿರ್ಧಾರ

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ಅಭಿವೃದ್ಧಿಗೆ ಕ್ರಮ

ಬ್ರಾಹ್ಮಣ ಅಭಿವೃದ್ದಿ ಮಂಡಳಿ ಸ್ಥಾಪನೆಗೆ 25 ಕೋಟಿ ರೂ.

ಬೆಂಗಳೂರು(ಜು.5): ಸಿಎಂ ಕುಮಾರಸ್ವಾಮಿ ನೂತನ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸಿದ್ದಾರೆ. ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ಕುರಿತು ಪರ-ವಿರೋಧ ಚರ್ಚೆ ಆರಂಭವಾಗಿದೆ. ಅದರಲ್ಲೂ ಬಜೆಟ್ ನಲ್ಲಿ ಪ್ರಾಂತ್ಯವಾರು ತಾರತಮ್ಯ ಎದ್ದು ಕಾಣುತ್ತಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಈ ಮಧ್ಯೆ ಕುಮಾರಸ್ವಾಮಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಹಲವು ವಿನೂತನ ಆಕರ್ಷಕ ಯೋಜನೆಗಳೂ ಇದ್ದು, ಪ್ರಮುಖವಾಗಿ ಬಡ ಬ್ರಾಹ್ಮಣರಿಗೂ ಆರ್ಥಿಕ ನೆರವು ನೀಡಲು ಕುಮಾರಸ್ವಾಮಿ ಒಲವು ತೋರಿದ್ದಾರೆ.

ಬಡ ಬ್ರಾಹ್ಮಣರಿಗೆ ಆರ್ಥಿಕ ನೆರವು ಒದಗಿಸಲು ಮುಂದಾಗಿರುವ ಸಿಎಂ ಕುಮಾರಸ್ವಾಮಿ, ಈ ಹಿನ್ನೆಲೆಯಲ್ಲಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ನಿರ್ಧಾರ ಕೈಗೊಂಡಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ಅಭಿವೃದ್ಧಿಗೆ ಈ ಮೂಲಕ ಕ್ರಮ ಕೈಗೊಳ್ಳಲಾಗಿದೆ. 

ಅಲ್ಲದೇ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ 25 ಕೋಟಿ ರೂ. ಮೀಸಲಿರಿಸಲಾಗಿದ್ದು, ಈ ಮಂಡಳಿ ಮೂಲಕ ಬಡ ಬ್ರಾಹ್ಮಣರಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಕುಮಾರಸ್ವಾಮಿ ಘೋಷಿಸಿದ್ದಾರೆ. 
 

click me!