ಸಾಲಮನ್ನಾಗೆ ಎಂ.ಎಲ್.ಎ ಫಂಡ್ ವಾಪಸ್!

Published : Jul 03, 2018, 01:47 PM IST
ಸಾಲಮನ್ನಾಗೆ ಎಂ.ಎಲ್.ಎ ಫಂಡ್ ವಾಪಸ್!

ಸಾರಾಂಶ

ಸಾಲ ಮನ್ನಾ ಹಣ ಹೊಂದಿಸಲು ಹರಸಾಹಸ ಎಂ.ಎಲ್.ಎ ಫಂಡ್ ಮೇಲೆ ಸಿಎಂ ಕಣ್ಣು ಸಾವಿರಕ್ಕೂ ಹೆಚ್ಚು ಕೋಟಿ ಬಾಕಿ ಆರ್ಥಿಕ ಇಲಾಖೆಗೆ ವಾಪಾಸ್

ಬೆಂಗಳೂರು(ಜು.3): ರೈತರ ಸಾಲಮನ್ನಾ ಮಾಡಿಯೇ ಸಿದ್ದ ಎಂದು ಹಠ ಹಿಡಿದಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸಾಲಮನ್ನಾಗೆ ಹಣ ಹೊಂದಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ರೈತರ ಸಂಪೂರ್ಣ ಸಾಲಮನ್ನಾಗೆ ಬೇಕಾಗುವ ಹಣವನ್ನು ಸಾಧ್ಯವಾದಷ್ಟೂ ಮೂಲಗಳಿಂದ ಹೊಂದಿಸಲು ಸಿಎಂ ಮುಂದಾಗಿದ್ದಾರೆ. ಹೀಗಾಗಿ ಸರ್ಕಾರದ ವಿವಿಧ ಇಲಾಖೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಇದೇ ಕಾರಣಕ್ಕೆ ಖರ್ಚಾಗದೇ  ಉಳಿದಿರುವ ಸಾವಿರಾರು ಕೋಟಿ ಎಂ.ಎಲ್.ಎ ಫಂಡ್ ನ್ನು ಆರ್ಥಿಕ ಇಲಾಖೆಗೆ ವಾಪಸ್ಸು ಕಳುಹಿಸುವ ನಿರ್ಧಾರ ಕೈಗೊಳ್ಳಲಾಗಿದೆ.

2002  ರಿಂದ 2014 ರ ವರೆಗೆ ಸಾವಿರ ಕೋಟಿ ರೂ. ಶಾಸಕರ ನಿಧಿ ಬಳಕೆ ಆಗದೇ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಉಳಿದಿತ್ತು. ರಾಜ್ಯದ ಎಲ್ಲ ಶಾಸಕರಿಗೆ ಹಾಗು ವಿಧಾನ ಪರಿಷತ್ ಸದಸ್ಯರಿಗೆ ಕಳೆದ ಬಜೆಟ್ ನಲ್ಲಿ ಮೂರು ಕೋಟಿ ರೂಪಾಯಿ ಅನುದಾನ ನಿಗದಿಪಡಿಸಲಾಗಿತ್ತು. ಅದಕ್ಕೂ ಮುಂಚೆ ಎರಡು ಕೋಟಿ ರೂ.ಹಣ ಒದಗಿಸಲಾಗುತ್ತಿತ್ತು.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಹಣವನ್ನು ಸರಕಾರಿ ಶಾಲೆಗಳು, ಆಸ್ಪತ್ರೆ ಗಳಲ್ಲಿ ಮೂಲಭೂತ ಸೌಲಭ್ಯಕ್ಕೆ ಬಳಸಿಕೊಳ್ಳಲು ತೀರ್ಮಾನಿಸಿತ್ತು. ಆದರೆ ಇದೀಗ ಈ ಹಣವನ್ನು ರೈತರ ಸಾಲ ಮನ್ನಾಕ್ಕೆ ಬಳಸಿಕೊಳ್ಳಲು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಬಳಕೆಯಾಗದೇ ಉಳಿದಿರುವ ಒಂದು ಸಾವಿರಕ್ಕೂಅಧಿಕ ಕೋಟಿ ರೂ. ಅನುದಾನದ ಹಣವನ್ನು ಆರ್ಥಿಕ ಇಲಾಖೆ ವಾಪಸ್ಸು ಪಡೆದಿದೆ.  ಅಲ್ಲದೇ ಎಂ.ಎಲ್ ಎ ಫಂಡ್ ಜೊತೆಗೆ ಶಾಲಾಭಿವೃದ್ಧಿ ಸಮಿತಿಯಲ್ಲಿ ಉಪಯೋಗಿಸದೇ ಖಾತೆಯಲ್ಲಿ ಎಸ್.ಡಿ.ಎಂ.ಸಿ ಹಣವನ್ನೂ ವಾಪಾಸ್ಸು ಪಡೆಯಲಾಗಿದೆ.

ಇದೇ ವೇಳೆ ಗ್ರಾಮೀಣಾಭಿವೃದ್ಧಿ, ಆರೋಗ್ಯ, ಲೋಕೋಪಯೋಗಿ, ಶಿಕ್ಷಣ ಇಲಾಖೆ ಸೇರಿದಂತೆ ಹಲವಾರು ಇಲಾಖೆಗಳಲ್ಲಿ ಬಳಸದೇ ಬ್ಯಾಂಕ್ ಖಾತೆಯಲ್ಲಿ ನಿರುಪಯುಕ್ತವಾಗಿರುವ ಹಣದ ಮಾಹಿತಿ ಸಂಗ್ರಹಿಸಿ ಹಣಕಾಸು ಇಲಾಖೆಗೆ ವಾಪಾಸ್ಸು  ತರಿಸಿಕೊಳ್ಳುಲು ಸಿಎಂ ಮುಂದಾಗಿದ್ದಾರೆ. ಇನ್ನು ಶಾಸಕರ ಪ್ರದೇಶಾಭಿವೃದ್ಧಿಯ ಅನುದಾನದ ಬಾಕಿ ಹಣವನ್ನು ಸರ್ಕಾರ ಹಿಂದಕ್ಕೆ ಪಡೆದಿರುವುದಕ್ಕೆ ಬಿಜೆಪಿ ಶಾಸಕರು ಅಸಮಾಧಾನ ಹೊರಕಹಾಕಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ