
ಬೆಂಗಳೂರು (ಡಿ. 26): ಎತ್ತಿನಹೊಳೆ ಯೋಜನೆ ಸಮಸ್ಯೆ ಪರಿಹರಿಸಲು ಸಿಎಂ ನೇತೃತ್ವದಲ್ಲಿ ನಡೆದ ಸಭೆ ವಿಫಲವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಪ್ರತಿಷ್ಠೆಗೆ ಸಭೆ ಬಲಿಯಾಗಿದೆ.
ಯೋಜನೆ ಅನುಮೋದನೆ ಸಂಬಂಧ ಉಭಯ ಪಕ್ಷಗಳ ನಾಯಕರ ನಡುವೆ ವಾಗ್ವಾದ ನಡೆದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಯೋಜನೆಗೆ ಅನುಮೋದನೆ ದೊರೆತಿದ್ದು, ಈಗ ಕಾಂಗ್ರೆಸ್ ಸರ್ಕಾರ ಮುಂದುವರೆಸುತ್ತಿದೆ ಎಂದು ಸರ್ಕಾರದ ಪರವಾಗಿ ಸಚಿವರಾದ ಎಂ.ಬಿ. ಪಾಟೀಲ್, ಮತ್ತು ರಮಾನಾಥರೈ ವಾದಮಾಡಿದರು.
ಯೋಜನೆಯಲ್ಲಿ ಸಾಕಷ್ಟು ಗೊಂದಲಗಳಿವೆ. ಸರ್ಕಾರ ಹೇಳುವಷ್ಟು ನೀರು ಬರುವುದಿಲ್ಲ. ಸರ್ಕಾರ ಕರಾವಳಿ ಮತ್ತು ಬಯಲು ಸೀಮೆಯ ಎರಡೂ ಕಡೆಯ ಜನರಿಗೆ ಮಂಕು ಬೂದಿ ಎರಚುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ವಾದ ಮಾಡಿದ್ದಾರೆ. ಆದ್ರೆ, ಸರ್ಕಾರ ಯೋಜನೆಯನ್ನು ಮುಂದುವರೆಸುವುದಾಗಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದು, ಅಗತ್ಯ ಬಿದ್ದರೆ, ಕರಾವಳಿ ಭಾಗದ ಜನರ ಜೊತೆಗೂ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.