
ಬೆಂಗಳೂರು (ಸೆ.10): ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿರುವ ಕ್ರಮವನ್ನು ಬಿಜೆಪಿ ಟೀಕಿಸಿದೆ.
ಕಾವೇರಿ ವಿಚಾರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆ ವೈಫಲ್ಯವನ್ನು ಮರೆಮಾಚಲು ಮುಖ್ಯಮಂತ್ರಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ, ಎಂದು ಬಿಜೆಪಿ ವಕ್ತಾರ ಎಸ್. ಪ್ರಕಾಶ್ ಹೇಳಿದ್ದಾರೆ.
ಕಾವೇರಿ ವಿಚಾರದಲ್ಲಿ ಸಾಂವಿಧಾನಿಕ ಪ್ರಕ್ರಿಯೆಗಳ ಸಂಪೂರ್ಣ ಅರಿವಿದ್ದೂ, ಪ್ರಧಾನಿಯವರು ಮಧ್ಯಪ್ರವೇಶಿಸುವಂತಿಲ್ಲ ಎಂದು ಗೊತ್ತಿದ್ದರೂ, ಸಿದ್ದರಾಮಯ್ಯನವರು ಪ್ರಧಾನಿಗೆ ಪತ್ರ ಬರೆದಿದ್ದಾರೆ, ಎಂದು ಪ್ರಕಾಶ್ ಹೇಳಿದ್ದಾರೆ.
ಆ ಮೂಲಕ ತಮ್ಮ ವೈಫಲ್ಯದ ಹೊಣೆಗಾರಿಕೆಯನ್ನು ಬೇರೆಡೆಗೆ ವರ್ಗಾಯಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.