
ಬೆಂಗಳೂರು(ಮಾ.18):ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡೂ ಕ್ಷೇತ್ರಗಳ ಉಪಚುನಾವಣೆ ಗೆಲ್ಲಲು ನಾನಾ ರೀತಿಯ ಪ್ರಯತ್ನ ಮಾಡ್ತಿದ್ದಾರೆ. ಈ ಪೈಕಿ ಬಹುಮುಖ್ಯವಾಗಿ ಸಿಎಂ ಆದ ನಂತರ ಮೊಟ್ಟಮೊದಲ ಬಾರಿಗೆ ಕೆಪಿಸಿಸಿ ಕಚೇರಿಯಲ್ಲಿ ಸರ್ವಸಚಿವರ ಸಭೆ ನಡೆಸಿ ರಣತಂತ್ರ ಹೆಣೆಯಲು ಸಜ್ಜಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಇದೇ 19ರಂದು ಈ ಮಹತ್ವದ ಸಭೆ ನಡೆಯಲಿದೆ. ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಗಳ ಗೆಲುವಿಗೆ ಈ ಸಭೆಯಲ್ಲಿ ರಣತಂತ್ರ ಹೆಣೆಯಲಿರುವ ಸಚಿವರು, ರಾಜ್ಯದಲ್ಲಿ ಎದುರಾಗಲಿರುವ ನೀರಿನ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ ನಡೆಸಿ ಪರಿಹಾರ ಸೂತ್ರ ಸಿದ್ದಪಡಿಸಲಿದ್ದಾರೆ.
ಇನ್ನು ಮುಂಬರುವ ಸಾರ್ವತ್ರಿಕ ಚುನಾವಣೆಗಳ ದೃಷ್ಟಿಯಿಂದ ಸಚಿವರು ಇನ್ನು ಮುಂದೆ ಜಿಲ್ಲೆಗಳಲ್ಲಿ ಹೆಚ್ಚಿನ ಸಮಯ ಕಳೆದು ಕೆಲಸ ಮಾಡಲು ಸರ್ವಸಚಿವರ ಸಭೆಯಲ್ಲಿ ಸೂಚಿಸಲಿದ್ದಾರೆ. ಸಭೆಯಲ್ಲಿ ಎರಡೂ ಕ್ಷೇತ್ರಗಳ ಉಪಚುನಾವಣೆ ಗೆಲುವು ಹಾಗೂ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ವಹಿಸಬೇಕಾದ ಪೂರ್ವಭಾವಿ ಮುಂಜಾಗ್ರತೆಗಳ ಬಗ್ಗೆ ವಿಸ್ತ್ರತ ಚರ್ಚೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.