ಮುಷ್ಕರ ನಿರತ ವೈದ್ಯರೊಂದಿಗೆ ಸಿಎಂ ಸಂಧಾನ ಸಭೆ ಸಫಲ

Published : Nov 13, 2017, 04:20 PM ISTUpdated : Apr 11, 2018, 12:38 PM IST
ಮುಷ್ಕರ ನಿರತ ವೈದ್ಯರೊಂದಿಗೆ ಸಿಎಂ ಸಂಧಾನ ಸಭೆ  ಸಫಲ

ಸಾರಾಂಶ

ಮುಷ್ಕರ ನಿರತ ವೈದ್ಯರೊಂದಿಗೆ ಸಿಎಂ ಸಂಧಾನಸಭೆ  ಸಫಲವಾಗಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕದಲ್ಲಿ ತಿದ್ದುಪಡಿ ತರಲು ಸರ್ಕಾರ ಸಮ್ಮತಿ ಸೂಚಿಸಿದೆ. ವೈದ್ಯರಿಗೆ ಜೈಲು ಶಿಕ್ಷೆ ವಿಧಿಸುವ ನಿಯಮ ಸಡಿಲಿಸುವ ವಿಷಯದಲ್ಲಿ ಮಾತ್ರ ಸರ್ಕಾರದ ಬಿಗಿಪಟ್ಟು ಹಿಡಿದಿದೆ.  ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಮುನ್ನ ಮತ್ತೊಮ್ಮೆ ಐಎಂಎ ಪಧಾಧಿಕಾರಿಗಳೊಂದಿಗೆ ಚರ್ಚಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ.

ಬೆಳಗಾವಿ (ನ.13): ಮುಷ್ಕರ ನಿರತ ವೈದ್ಯರೊಂದಿಗೆ ಸಿಎಂ ಸಂಧಾನಸಭೆ  ಸಫಲವಾಗಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕದಲ್ಲಿ ತಿದ್ದುಪಡಿ ತರಲು ಸರ್ಕಾರ ಸಮ್ಮತಿ ಸೂಚಿಸಿದೆ. ವೈದ್ಯರಿಗೆ ಜೈಲು ಶಿಕ್ಷೆ ವಿಧಿಸುವ ನಿಯಮ ಸಡಿಲಿಸುವ ವಿಷಯದಲ್ಲಿ ಮಾತ್ರ ಸರ್ಕಾರದ ಬಿಗಿಪಟ್ಟು ಹಿಡಿದಿದೆ.  ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಮುನ್ನ ಮತ್ತೊಮ್ಮೆ ಐಎಂಎ ಪಧಾಧಿಕಾರಿಗಳೊಂದಿಗೆ ಚರ್ಚಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಕಾರ್ಯಕಾರಿ ಸಮಿತಿಯೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಐಎಂಎ ಅಧ್ಯಕ್ಷ ಡಾ.ರವೀಂದ್ರ ಹೇಳಿದ್ದಾರೆ.

ತಕ್ಷಣ ಮುಷ್ಕರ ಕೈ ಬಿಡುವಂತೆ ವೈದ್ಯರಿಗೆ ಮನವಿ  ಮಾಡುತ್ತೇನೆ. ವಿಧೇಯಕ ಮಂಡನೆಗೆ ಮೊದಲು ಮತ್ತೊಮ್ಮೆ ಅವರೊಂದಿಗೆ ಚರ್ಚಿಸುತ್ತೇನೆ. ಯಾರೂ ಮುಷ್ಕರ ಮಾಡಬೇಡಿ ಬೆಂಗಳೂರಿಗೆ ವಾಪಸ್ ಹೋಗಿ ಎಂದು ಮನವಿ ಮಾಡಿರುವುದಾಗಿ ಸಿಎಂ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!