ಮೋದಿ ಭಾಷಣ ಕೇಳುವ ಅಗತ್ಯವಿಲ್ಲವೆಂದ ಸಿಎಂ ಸಿದ್ದರಾಮಯ್ಯ

Published : Sep 11, 2017, 10:48 AM ISTUpdated : Apr 11, 2018, 01:05 PM IST
ಮೋದಿ ಭಾಷಣ ಕೇಳುವ ಅಗತ್ಯವಿಲ್ಲವೆಂದ ಸಿಎಂ ಸಿದ್ದರಾಮಯ್ಯ

ಸಾರಾಂಶ

"ದೀನ್ ದಯಾಳ್ ಜನ್ಮಶತಾಬ್ಧಿ ಭಾಷಣವಾದ್ರೆ ಅದು ಹಿಂದುತ್ವದ ಭಾಷಣವಾಗಿಯೇ ಇರುತ್ತದೆ. ಹಾಗಾಗಿ ಅಂತಹ ಭಾಷಣ ಕೇಳುವ ಅಗತ್ಯವಿಲ್ಲ" ಎಂದು ಹೇಳಿದ್ದಾರೆ.

ಮೈಸೂರು(ಸೆ.11): ಸ್ವಾಮಿ ವಿವೇಕನಂದರು ಚಿಕಾಗೋ ಭಾಷಣಕ್ಕೆ 125ನೇ ವರ್ಷ ತುಂಬಿದ ಹಿನ್ನಲೆಯಲ್ಲಿ ಹಾಗೂ ದೀನ್ ದಯಾಳ್ ಉಪಾಧ್ಯಾಯ ಅವರ 100ನೇ ವರ್ಷಾಚರಣೆ ಹಿನ್ನಲೆಯಲ್ಲಿ, ಇಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದು, ವಿವಿ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೇಳಬೇಕೆಂದು ಯುಜಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, "ದೀನ್ ದಯಾಳ್ ಜನ್ಮಶತಾಬ್ಧಿ ಭಾಷಣವಾದ್ರೆ ಅದು ಹಿಂದುತ್ವದ ಭಾಷಣವಾಗಿಯೇ ಇರುತ್ತದೆ. ಹಾಗಾಗಿ ಅಂತಹ ಭಾಷಣ ಕೇಳುವ ಅಗತ್ಯವಿಲ್ಲ" ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಂದಷ್ಟೇ ತಿಳಿದು ಬಂದಿದ್ದು, ನನಗೆ ಅಷ್ಟಾಗಿ ಸಂಪೂರ್ಣ ಮಾಹಿತಿಯಿಲ್ಲ. ಈ ಬಗ್ಗೆ ವಿವಿ ಜೊತೆ ಮಾತನಾಡುವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಮೈಸೂರು ವಿವಿಯಿಂದ ಮೋದಿ ಭಾಷಣ ಕೇಳುವಂತೆ ಸುತ್ತೋಲೆ ಹೊರಡಿಸಲಾಗಿತ್ತು, ಪ್ರಧಾನಿ ಮೋದಿ ಭಾಷಣ ವೀಕ್ಷಣೆಗೆ ಪರದೆ ವ್ಯವಸ್ಥೆ ಅಲ್ಲದೇ ಒಂದು ಸಾವಿರಕ್ಕೂ ಹೆಚ್ಚು ಮಂದಿ ಕೂರಲು ಅವಕಾಶ ಕಲ್ಪಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ : ಭಕ್ತರ ಹರ್ಷೋದ್ಗಾರ
3 ಲಕ್ಷ ರು. ಸನಿಹಕ್ಕೆ ಬೆಳ್ಳಿ ಬೆಲೆ