ನಾಚಿಕೆಯಾಗಬೇಕು ನಿನ್ನ ಜನ್ಮಕ್ಕೆ; ರಾಜೀನಾಮೆ ಕೊಟ್ಟು ಹೋಗು: ಮೇಟಿ ವಿರುದ್ಧ ಸಿಎಂ ಗುಡುಗು

Published : Dec 14, 2016, 07:24 AM ISTUpdated : Apr 11, 2018, 01:06 PM IST
ನಾಚಿಕೆಯಾಗಬೇಕು ನಿನ್ನ ಜನ್ಮಕ್ಕೆ; ರಾಜೀನಾಮೆ ಕೊಟ್ಟು ಹೋಗು: ಮೇಟಿ ವಿರುದ್ಧ ಸಿಎಂ ಗುಡುಗು

ಸಾರಾಂಶ

"ನಾಚಿಕೆಯಾಗಬೇಕು ನಿಮ್ಮ ಜನ್ಮಕ್ಕೆ. ರಾಜೀನಾಮೆ ಪತ್ರ ಪಡೆದು ಹೊರಹೋಗು" ಎಂದು ಸಿದ್ದರಾಮಯ್ಯನವರೇ ಖುದ್ದಾಗಿ ಮೇಟಿಯವರ ರಾಜೀನಾಮೆ ಪಡೆದಿದ್ದಾರೆ.

ಬೆಂಗಳೂರು(ಡಿ. 14): ರಾಸಲೀಲೆ ನಡೆಸಿದ ವಿಡಿಯೋ ಬಹಿರಂಗವಾಗುತ್ತಿದ್ದಂತೆಯೇ ಅಬಕಾರಿ ಸಚಿವ ಹೆಚ್.ವೈ.ಮೇಟಿಯವರನ್ನು ಸಿಎಂ ಸಿದ್ದರಾಮಯ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆಂಬ ಮಾಹಿತಿ ಸಿಕ್ಕಿದೆ. ಮಾಧ್ಯಮಗಳಲ್ಲಿ ರಾಸಲೀಲೆ ವಿಡಿಯೋ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಸಿಎಂ ಅವರನ್ನು ಭೇಟಿಯಾಗಲು ಹೋದ ಮೇಟಿಯವರಿಗೆ ಸರಿಯಾಗಿ ಮಂಗಳಾರತಿ ಆಗಿದೆ. ಈ ವಯಸ್ಸಿನಲ್ಲಿ ಇದೆಲ್ಲಾ ಬೇಕಿತ್ತೇನ್ರೀ ಎಂದು ಮೇಟಿಯವರನ್ನು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರೆನ್ನಲಾಗಿದೆ. ಜೊತೆಗೆ, ಪ್ರಕರಣದ ತನಿಖೆಗೆ ಸಿಎಂ ಆದೇಶಿಸಿದ್ದಾರೆ.

"ನೀನೊಬ್ಬ ವಿಶ್ವಾಸದ್ರೋಹಿ. ನಾಚಿಕೆಯಾಗಲ್ವಾ? ನಾವು ಬಿಜೆಪಿಯವರನ್ನು ಬೈಯುತ್ತಿದ್ದೆವು. ಈಗ ನೀವೇ ಹೀಗೇ ಮಾಡಿದ್ದೀಯ. ನಿನಗೆ ಸಚಿವ ಸ್ಥಾನ ನೀಡುವ ಬದಲು ಇನ್ಯಾರಿಗಾದರೂ ನೀಡಬೇಕಿತ್ತು. ಬಿಜೆಪಿ ವಿರುದ್ಧ ಆರೋಪ ಮಾಡಲಿಕ್ಕೆ ನಮಗೆ ಯಾವ ನೈತಿಕತೆ ಉಳಿಯಿತು?" ಎಂದು ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿ ಹೇಳಿದ್ದಾರೆ.

"ನಾಚಿಕೆಯಾಗಬೇಕು ನಿಮ್ಮ ಜನ್ಮಕ್ಕೆ. ರಾಜೀನಾಮೆ ಪತ್ರ ಪಡೆದು ಹೊರಹೋಗು" ಎಂದು ಸಿದ್ದರಾಮಯ್ಯನವರೇ ಖುದ್ದಾಗಿ ಮೇಟಿಯವರ ರಾಜೀನಾಮೆ ಪಡೆದಿದ್ದಾರೆ.

ಮೇಟಿ ರಾಜೀನಾಮೆ ಕೊಟ್ಟಿರುವ ವಿಷಯವನ್ನು ಸ್ವತಃ ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಬಹಿರಂಗಪಡಿಸಿದ್ದಾರೆ. ರಾಜೀನಾಮೆಯನ್ನು ಅಂಗೀಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದೇನೆ. ಪ್ರಕರಣದ ತನಿಖೆಗೆ ಆದೇಶವನ್ನೂ ಮಾಡಿದ್ದೇನೆ ಎಂದು ಟ್ವಿಟ್ಟರ್'ನಲ್ಲಿ ಸಿಎಂ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದಲ್ಲಿ 40 ಲಕ್ಷ ಮಂದಿಯಲ್ಲಿದೆ ಲೈಸೆನ್ಸ್ ಗನ್, ಯಾವ ರಾಜ್ಯಕ್ಕೆ ಮೊದಲ ಸ್ಥಾನ?
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌, ಕಾರ್ಯಸಾಧ್ಯತಾ ವರದಿ ಬಗ್ಗೆ ಕರ್ನಾಟಕ ಪ್ರತಿಕ್ರಿಯೆ ನೀಡಿಲ್ಲ ಎಂದ ಕೇಂದ್ರ!