
ಬೆಂಗಳೂರು: ಛತ್ತೀಸ್ಗಢ ನಕ್ಸಲ್ ದಾಳಿಯಲ್ಲಿ ಹುತಾತ್ಮನಾದ ಧಾರವಾಡ ಯೋಧ ಮಂಜುನಾಥ್ ಜಕ್ಕನವರ್ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ₹25 ಲಕ್ಷ ಪರಿಹಾರ ಘೋಷಿಸಿದ್ದಾರೆ.
ವೀರಯೋಧ ಮಂಜುನಾಥ್ ಜಕ್ಕನವರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿದ್ದಾರೆ.
ಮಹಾರಾಷ್ಟ್ರ- ಛತ್ತೀಸ್ಗಢ ಗಡಿಯಲ್ಲಿರುವ ಸಿಆರ್ಪಿಎಫ್ ಶಿಬಿರದ ಮೇಲೆ ಭಾನುವಾರ ತಡರಾತ್ರಿ ನಡೆದ ನಕ್ಸಲ್ ದಾಳಿಯಲ್ಲಿ ಧಾರವಾಡ ಮೂಲದ ಮಂಜುನಾಥ್ ಜಕ್ಕನವರ್ (30) ಹುತಾತ್ಮರಾಗಿದ್ದಾರೆ.
ಧಾರವಾಡ ತಾಲೂಕಿನ ಮನಗುಂಡಿಯ ಮಂಜುನಾಥ ಶಿವಲಿಂಗಪ್ಪ ಜಕ್ಕನ್ನವರ ಛತ್ತೀಸ್ಗಢದಲ್ಲಿ ಸಿಆರ್ಪಿಎಫ್ನ 133 ಕೋಬ್ರಾ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮಹಾರಾಷ್ಟ್ರ- ಛತ್ತೀಸ್’ಗಢದ ಗಡಿ ಪ್ರದೇಶವಾದ ಗಡ್ಚಿರೋಲಿಯ ಧನೋರಾ ಬಳಿ ನಕ್ಸಲರ ಜೊತೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಗುಂಡು ತಗುಲಿ ಅವರು ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾದೇ ಮಂಜುನಾಥ ಮೃತಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.