
ಬೆಂಗಳೂರು (ಫೆ.26): ಡೈರಿ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲೂ ಈ ವಿಚಾರ ಪ್ರಸ್ತಾಪ ಆಯಿತು.
ಡೈರಿ ವಿಚಾರವಾಗಿ ಕಳೆದ ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ , ಸಿಎಂ ಸಿದ್ದರಾಮಯ್ಯ , ಡೈರಿ ವಿಚಾರವಾಗಿ ಬಿಜೆಪಿ ಹೋರಾಟಕ್ಕೆ ಸಿದ್ಧತೆ ನಡೆಸಿದೆ, ಅದು ಕಾಂಗ್ರೆಸ್ ಪಕ್ಷಕ್ಕೆ ಹೋರಾಟ ಹೊಸದೇನಲ್ಲ . ಕಾಂಗ್ರೆಸ್ ಪಕ್ಷ ಬ್ರಿಟೀಷರ ವಿರುದ್ದವೇ ಹೋರಾಟ ಮಾಡಿದೆ. ಈಗ ಬಿಜೆಪಿಗೆ ನಾವು ಹೆದರುತ್ತೀವಾ? ಬಿಜೆಪಿಯವರು ಏನು ಮಾಡ್ತಾರೋ ನೋಡೋಣ ಎಂದು ಸವಾಲು ಹಾಕಿದರು.
ಈಗ ನಮ್ಮ ಪಕ್ಷ ಅಧಿಕಾರದಲ್ಲಿದೆ. ಹೋರಾಟ ಮಾಡಲೇಬೇಕು ಎಂಬ ಸನ್ನಿವೇಶ ನಿರ್ಮಾಣ ಆದರೆ ಬಿಜೆಪಿಯವರಿಗಿಂತ ಹತ್ತು ಪಟ್ಟು ಹೆಚ್ಚು ಹೋರಾಟ ಮಾಡುತ್ತೇವೆ. ಕರ್ನಾಟಕದಲ್ಲಿ ಬಿಜೆಪಿಗಿಂತ ದುರ್ಬಲ ಪಕ್ಷ ಇನ್ನೊಂದು ಇಲ್ಲ ಎಂದು ಸಿಎಂ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.