
ಬೆಂಗಳೂರು (ಅ.19): ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವ ಪಕ್ಷದ ನಾಯಕರ ಸಭೆ ಕರೆದಿದ್ದಾರೆ.
ಅಕ್ಟೋಬರ್ 21 ರಂದು ಮುಂಬೈನಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಹಿನ್ನೆಲೆಯಲ್ಲಿ ರಾಜ್ಯದ ನಿಲುವು ಚರ್ಚಿಸಲು ಸಿಎಂ ಸಭೆ ಕರೆದಿದ್ದು, ಮಹತ್ವ ಪಡೆದುಕೊಂಡಿದೆ.
ಸಂಜೆ 6 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ನಡೆಯಲಿರೋ ಸಭೆಯಲ್ಲಿ ಪ್ರತಿಪಕ್ಷಗಳ ನಾಯಕರು, ಸಂಸದರು ಹಾಗೂ ಧಾರವಾಡ, ಬೆಳಗಾವಿ, ಗದಗ್ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನ ಪ್ರತಿನಿಧಿಗಳೂ ಭಾಗವಹಿಸಲಿದ್ದಾರೆ.
ಅಕ್ಟೋಬರ್ 21 ರಂದು ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಗೋವಾ ಮತ್ತು ಕರ್ನಾಟಕ ಸೇರಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ.
ಇದಕ್ಕೂ ಮುನ್ನ ಸಿಎಂ ಇವತ್ತು ಸರ್ವಪಕ್ಷಗಳ ಸಭೆ ನಡೆಸುತ್ತಿದ್ದು, ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ನಿಲುವು ಏನಿರಬೇಕೆಂದು ಸಿಎಂ ಅಭಿಪ್ರಾಯ ಪಡೆಯಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.