ಶಶಿಕಲಾಗೆ ರಾಜಾತಿಥ್ಯ ನೀಡುವಂತೆ ನಾನು ಸೂಚಿಸಿಲ್ಲ: ಸಿಎಂ ಸಮರ್ಥನೆ

Published : Mar 07, 2018, 02:31 PM ISTUpdated : Apr 11, 2018, 12:44 PM IST
ಶಶಿಕಲಾಗೆ ರಾಜಾತಿಥ್ಯ ನೀಡುವಂತೆ ನಾನು ಸೂಚಿಸಿಲ್ಲ: ಸಿಎಂ ಸಮರ್ಥನೆ

ಸಾರಾಂಶ

ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡುವಂತೆ ಬಂಧೀಖಾನೆ ಇಲಾಖೆಯ ಅಂದಿನ ಡಿಜಿಪಿಯವರಿಗೆ ತಾವು ಸೂಚನೆ ನೀಡಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು (ಮಾ. 07):  ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡುವಂತೆ ಬಂಧೀಖಾನೆ ಇಲಾಖೆಯ ಅಂದಿನ ಡಿಜಿಪಿಯವರಿಗೆ ತಾವು ಸೂಚನೆ ನೀಡಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಶಶಿಕಲಾ ಅವರಿಗೆ ಹಾಸಿಗೆ ಮತ್ತು ದಿಂಬು ಸೌಲಭ್ಯ ಒದಗಿಸಿದ್ದಾಗಿ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ಅವರು ನೀಡಿರುವ ಹೇಳಿಕೆ ಸುಳ್ಳು ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.  ಶಶಿಕಲಾ ಅವರಿಗೆ ಕಾರಾಗೃಹದಲ್ಲಿ ಮೂಲಭೂತ ಸೌಕರ್ಯಗಳನ್ನೂ ಒದಗಿಸಿಲ್ಲ  ಎಂದು  ತಮಿಳುನಾಡಿನ  ಒಂದು  ನಿಯೋಗ  ತಮ್ಮ  ಕಚೇರಿಗೆ ಬಂದು ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಹಾಗೂ ಜೈಲಿನ ಮ್ಯಾನುಯಲ್ ಪ್ರಕಾರ ಒದಗಿಸಬೇಕಾದ ಸೌಲಭ್ಯಗಳನ್ನು ಮಾತ್ರ ಶಶಿಕಲಾ ಅವರಿಗೆ ಕೊಡುವಂತೆ ಸತ್ಯನಾರಾಯಣರಾವ್ ಅವರಿಗೆ ಸೂಚಿಸಲಾಗಿತ್ತು. ಆದರೆ, ರಾಜಾತಿಥ್ಯ ಒದಗಿಸುವಂತೆ ಹೇಳಿರಲಿಲ್ಲ ಎಂದು ಮುಖ್ಯಮಂತ್ರಿಯವರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ತನಿಖೆಯನ್ನು ಎಸಿಬಿಗೆ ವಹಿಸಲಾಗಿದೆ. ಹೀಗಾಗಿ ಸತ್ಯನಾರಾಯಣರಾವ್ ಅವರು ಆಧಾರ ರಹಿತ ಆರೋಪವನ್ನು ತಮ್ಮ ವಿರುದ್ಧ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ