
ಬೆಂಗಳೂರು: ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ನ್ಯಾ. ಕೆಂಪಣ್ಣ ಆಯೋಗವು ಕ್ಲೀನ್ ಚಿಟ್ ನೀಡಿದೆ ಎಂದು ಹೇಳಲಾಗಿದೆ.
5 ವಿಷಯಗಳ ಬಗ್ಗೆ ತನಿಖೆ ನಡೆಸಿರುವ ಕೆಂಪಣ್ಣ ಆಯೋಗ, ಅರ್ಕಾವತಿ ಲೇಔಟ್ ಡಿನೋಟಿಫಿಕೇಶ ಸಿಎಂ ಸಿದ್ದರಾಮಯ್ಯ ತಪ್ಪೆಸಗಿಲ್ಲ, ಕೆಳ ಹಂತದ ಅಧಿಕಾರಿಗಳಿಂದಷ್ಟೇ ತಪ್ಪಾಗಿದೆ ಎಂದು ಉಲ್ಲೇಖಿಸಿವೆ ಎಂದು ಉನ್ನತ ಮೂಲಗಳು ಸುವರ್ಣ ನ್ಯೂಸ್’ಗೆ ತಿಳಿಸಿವೆ.
ಸಚಿವ ಸಂಪುಟದ ಮುಂದೆ ಬರಲಿರುವ ಕೆಂಪಣ್ಣ ಆಯೋಗದ ವರದಿಯನ್ನು ಪುರಸ್ಕರಿಸುವುದು ಅಥವಾ ತಿರಸ್ಕರಿಸುವುದು ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ.
ಆಯೋಗದ ವರದಿಯು ಸರ್ಕಾರಕ್ಕೆ ಪೂರಕವಾಗಿದ್ದರೆ ವರದಿ ಒಪ್ಪಿಕೊಳ್ಳಬಹುದು ಹಾಗೂ ಮುಂದಿನ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.