
ಬೆಂಗಳೂರು(ಜೂ.18): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಲ್ಯದ ಗೆಳೆಯರು ಯಾರು? ಅವರದು ಪ್ರೇಮ ವಿವಾಹವೇ? ಅವರು ಶಾಲೆಗೆ ಹೋಗುತ್ತಿದ್ದ ದಿನಗಳಲ್ಲಿ ಹೇಗಿದ್ದರು? ಅವರ ಊರಿನ ಮನೆ ಹೇಗಿತ್ತು? ಸಿದ್ದರಾಮಯ್ಯ ನವರನ್ನು ಅವರ ಗೆಳೆಯರು ಏನಂತ ಕರೆಯುತ್ತಾರೆ?
ಇದನ್ನೆಲ್ಲ ತಿಳಿದುಕೊಳ್ಳುವ ಆಸಕ್ತಿ ಇದೆಯಾ? ಹಾಗಿದ್ದರೆ ನೀವು ಈ ಶನಿವಾರ, ಜೂ.24ರಂದು ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ನೋಡಬೇಕು. ಝೀ ಟೀವಿಯಲ್ಲಿ ಪ್ರಸಾರ ಆಗುತ್ತಿರುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ಶನಿವಾರದ ಸಂಚಿಕೆ ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಧಕರ ಕುರ್ಚಿಯನ್ನು ಏರಲಿದ್ದಾರೆ.
ಸಿದ್ದರಾಮಯ್ಯ ಅವರ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಎಲ್ಲರಿಗೂ ಇರುತ್ತದೆ. ಅವರು ಸಾಧಕರೂ ಹೌದು. ಹೀಗಾಗಿ ಅವರನ್ನು ಸಾಧಕರ ಕುರ್ಚಿ ಯಲ್ಲಿ ಕೂರುವಂತೆ ವಿನಂತಿಸಿ ಕೊಂಡಿದ್ದೆವು. ಒಪ್ಪಿರುವುದು ಸಂತೋಷ. ಜೂ.22ರಂದು ಚಿತ್ರೀಕರಣ ನಡೆಯುತ್ತದೆ ಎಂದು ಝೀ ಟೀವಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.