
ಬೆಂಗಳೂರು (ಮಾ. 01): ಏಷ್ಯಾ ಖಂಡದಲ್ಲೇ ಅತಿ ದೊಡ್ಡದು ಎನ್ನುವ ಖ್ಯಾತಿ ಹೊಂದಿರುವ ಪಾವಗಡದ ಸೋಲಾರ್ ಪಾರ್ಕ್'ನ ಮೊದಲ ಹಂತದ ಯೋಜನೆಯನ್ನ ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದಾರೆ.
ಪಾವಗಡ ತಾಲ್ಲೂಕಿನಲ್ಲಿ ಸುಮಾರು 13 ಸಾವಿರ ಎಕರೆಯಲ್ಲಿ ನಿರ್ಮಾಣವಾಗುತ್ತಿರುವ 10 ಸಾವಿರ ಕೋಟಿ ವೆಚ್ಚದ ಸೋಲಾರ್ ಪಾರ್ಕ್ ಮೊದಲ ಹಂತದ ಕಾಮಗಾರಿಯನ್ನ ಪೂರ್ಣಗೊಳಿಸಿದೆ. ಒಟ್ಟು 2 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಿರುವ ಸೋಲಾರ್ ಪಾರ್ಕ್ ಮೊದಲ ಹಂತದಲ್ಲಿ 600 ಮೆಗಾ ವ್ಯಾಟ್ ವಿದ್ಯುತ್ತ್ ಪೂರೈಸಲು ಅಣಿಯಾಗಿದೆ.
ಪ್ರಸ್ತುತ 13 ಸಾವಿರ ಎಕರೆ ಪ್ರದೇಶದಲ್ಲಿ 12 ಸಾವಿರ ಎಕರೆ ಪ್ರದೇಶವನ್ನು ರೈತರಿಂದ ಪಡೆದು ಕಂಪನಿಗೆ ಹಸ್ತಾಂತರಿಸಲಾಗಿದೆ. ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಅನೇಕರು ಇಂದಿನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.