ಅನಗತ್ಯ ವೆಚ್ಚದ ಟೀಕೆಯಿಂದ ತಪ್ಪಿಸಿಕೊಳ್ಳಲು ಸಿಎಂ ಪ್ಲಾನ್

Published : Oct 20, 2017, 12:12 PM ISTUpdated : Apr 11, 2018, 01:12 PM IST
ಅನಗತ್ಯ ವೆಚ್ಚದ ಟೀಕೆಯಿಂದ ತಪ್ಪಿಸಿಕೊಳ್ಳಲು ಸಿಎಂ ಪ್ಲಾನ್

ಸಾರಾಂಶ

ರಾಜ್ಯ ಸರ್ಕಾರ ಮತ್ತು ವಿಧಾನಮಂಡಲ ಸಚಿವಾಲಯದ ಮಧ್ಯೆ ಕಂದಕ ತಂದಿಟ್ಟಿತಾ ವಿಧಾನಸೌಧ ವಜ್ರಮಹೋತ್ಸವ? ವಜ್ರಮಹೋತ್ಸವಕ್ಕೂ ತನಗೂ ಸಂಬಂಧ ಇಲ್ಲದಂತೆ ವರ್ತಿಸುತ್ತಿದೆಯಾ ರಾಜ್ಯ ಸರ್ಕಾರ? ಅದ್ದೂರಿ ವೆಚ್ಚಕ್ಕೆ ಕಡಿವಾಣ ಹಾಕಿ ಸಾರ್ವಜನಿಕ ಟೀಕೆಗಳಿಂದ ತಪ್ಪಿಸಿಕೊಳ್ಳಲು‌ ಸಿಎಂ ಸಿದ್ದರಾಮಯ್ಯ ಪ್ಲಾನ್  ಮಾಡಿದ್ದಾರಾ? ಹೌದು ಈ ಎಲ್ಲಾ ಪ್ರಶ್ನೆಗಳು ಹುಟ್ಟಿಕೊಳ್ಳಲು ಕಾರಣವಿದೆ.

ಬೆಂಗಳೂರು(ಅ.20): ರಾಜ್ಯ ಸರ್ಕಾರ ಮತ್ತು ವಿಧಾನಮಂಡಲ ಸಚಿವಾಲಯದ ಮಧ್ಯೆ ಕಂದಕ ತಂದಿಟ್ಟಿತಾ ವಿಧಾನಸೌಧ ವಜ್ರಮಹೋತ್ಸವ? ವಜ್ರಮಹೋತ್ಸವಕ್ಕೂ ತನಗೂ ಸಂಬಂಧ ಇಲ್ಲದಂತೆ ವರ್ತಿಸುತ್ತಿದೆಯಾ ರಾಜ್ಯ ಸರ್ಕಾರ? ಅದ್ದೂರಿ ವೆಚ್ಚಕ್ಕೆ ಕಡಿವಾಣ ಹಾಕಿ ಸಾರ್ವಜನಿಕ ಟೀಕೆಗಳಿಂದ ತಪ್ಪಿಸಿಕೊಳ್ಳಲು‌ ಸಿಎಂ ಸಿದ್ದರಾಮಯ್ಯ ಪ್ಲಾನ್  ಮಾಡಿದ್ದಾರಾ? ಹೌದು ಈ ಎಲ್ಲಾ ಪ್ರಶ್ನೆಗಳು ಹುಟ್ಟಿಕೊಳ್ಳಲು ಕಾರಣವಿದೆ.

ಅಕ್ಟೋಬರ್ 21 ಕ್ಕೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ವಜ್ರಮಹೋತ್ಸವ ದಿನದಿಂದೇ ನಡೆಸಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಬಳಿಕ ಯಾವುದೇ ಸಾಕ್ಷ್ಯಚಿತ್ರ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದನ್ನು ತಪ್ಪಿಸಿಕೊಳ್ಳಲು ಸಚಿವ ಸಂಪುಟ ಸಭೆ ನಿಗದಿ ಮಾಡಿದ್ದಾರಾ ಎಂಬ ಅನುಮಾನ ಮೂಡಿದೆ.

ಅದ್ದೂರಿ, ಅನಗತ್ಯ ವೆಚ್ಚದ ಟೀಕೆಯಿಂದ ತಪ್ಪಿಸಿಕೊಳ್ಳಲು ವಜ್ರ ‌ಮಹೋತ್ಸವಕ್ಕೂ ತನಗೂ ಸಂಬಂಧ ಇಲ್ಲ ಎಂದು ಬಿಂಬಿಸಿಕೊಳ್ಳಲು ಸರ್ಕಾರ ಯತ್ನ ನಡೆಸುತ್ತಿದೆಯಾ ಎಂಬ ಅನುಮಾನ ಕೂಡ ಇದೆ. ಇನ್ನೂ  ವಜ್ರಮಹೋತ್ಸವ ದಿನದಂದೇ ಸಚಿವ ಸಂಪುಟ ಸಭೆ ನಿಗದಿ ಮಾಡಿರುವ ಸರ್ಕಾರದ ಕ್ರಮಕ್ಕೆ ವಿಧಾನ ಮಂಡಲ ಸಚಿವಾಲಯದ ಮುಖ್ಯಸ್ಥರಿಂದ ಆಂತರಿಕ ಅಸಮಾಧಾನ ವ್ಯಕ್ತವಾಗಿದ್ದು ಈವರೆಗೂ ಕಾರ್ಯಕ್ರಮದ ಆಹ್ವಾನ ಪತ್ರಿಕೆಕೂಡ ಮುದ್ರಣವಾಗಿಲ್ಲ.

ಒಟ್ಟಾರೆ ವಿಧಾನಸೌಧ ವಜ್ರಮಹೋತ್ಸವ ಕಾರ್ಯಕ್ರಮ ಪ್ರತಿಷ್ಟೆಗೆ ಬಲಿಯಾಗುತ್ತಾ ಎಂಬ ಪ್ರಶ್ನೆ ಮೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್