
ಚೆನ್ನೈ(ಡಿ.06): ತಮಿಳುನಾಡಿನ ಜನತೆಯ ಪಾಲಿನ 'ಅಮ್ಮ'. ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸಿದ ಉಕ್ಕಿನ ಮಹಿಳೆ ಇದೀಗ ಈ ಲೋಕವನ್ನು ತೊರೆದು ಅಸ್ತಂಗತರಾಗಿದ್ದಾರೆ. ತಮಿಳುನಾಡಿನ ಜನತೆ ಅನಾಥರಾಗಿದ್ದಾರೆ. ಜಯಲಲಿತಾ ಸಾವಿಗೆ ಜನರು ಕಂಬನಿ ಮಿಡಿದಿದ್ದಾರೆ. ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆಸೇರಿ 74 ದಿನಗಳ ಸಾವು ಬದುಕಿನ , ಹೋರಾಟ ನಡೆಸಿ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಜಯಲಲಿತಾ ಅಂತಿಮ ದರ್ಶನಕ್ಕೆ ಗಣ್ಯಾತಿಗಣ್ಯರು ಆಗಮಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಕರ್ನಾಟಕ ಸಿಎಂ ಸಿದ್ಧರಾಮಯ್ಯ ತಮಿಳುನಾಡಿನ ರಾಜಕೀಯದಲ್ಲಿ ತನ್ನ ಅಳಿಯದ ಛಾಪು ಮೂಡಿಸಿದ್ದ ಜಯಾ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಜಯಲಲಿತಾ ಮೃತರಾದ ಹಿನ್ನೆಲೆಯಲ್ಲಿ ಗೌರವ ಸೂಚಕವಾಗಿ ಕರ್ನಾಟಕದಲ್ಲಿ ಒಂದು ಶೋಕಾಚರಣೆ ಆಚರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.