ಲಿಂಗಾಯತ ಯುದ್ಧ; ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

Published : Jul 26, 2017, 11:16 AM ISTUpdated : Apr 11, 2018, 12:41 PM IST
ಲಿಂಗಾಯತ ಯುದ್ಧ; ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಸಾರಾಂಶ

ಬಿಜೆಪಿಯವರ ವಿರುದ್ಧ ಹರಿಹಾಯ್ದ ಸಿಎಂ, ಭಾರತೀಯ ಜನತಾ ಪಕ್ಷ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. "ನಾನು ಜಾತಿ ರಾಜಕಾರಣ ಮಾಡುತ್ತಿದ್ದೇನೆಂದು ಹೇಳುತ್ತಿರುವ ಬಿಜೆಪಿಯವರೇ ಮಹಾನ್ ಜಾತಿವಾದಿಗಳು. ಎಲ್ಲದರಲ್ಲೂ ಅವರಿಗೆ ಜಾತಿ-ಧರ್ಮವೇ ಕಾಣುತ್ತದೆ" ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು(ಜುಲೈ 26): ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಕೊಡಬೇಕೆನ್ನುವ ಹೊಸ ವಿವಾದದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ. ಸ್ವತಂತ್ರ ಧರ್ಮದ ಬಗ್ಗೆ ನಮಗೆ ಮನವಿಯೇ ಬಂದಿಲ್ಲ. ಈ ಹಿನ್ನೆಲೆಯಲ್ಲಿ ನಾವು ಶಿಫಾರಸು ಮಾಡಲು ಹೇಗೆ ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೊದಲು ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಬೇಕೆನ್ನುವ ಮನವಿ ಬರಲಿ, ಆಮೇಲೆ ಶಿಫಾರಸಿನ ಬಗ್ಗೆ ಯೋಚಿಸೋಣ ಎಂದು ಹೇಳಿದ್ದಾರೆ.

ಇದೇ ವೇಳೆ, ಬಿಜೆಪಿಯವರ ವಿರುದ್ಧ ಹರಿಹಾಯ್ದ ಸಿಎಂ, ಭಾರತೀಯ ಜನತಾ ಪಕ್ಷ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. "ನಾನು ಜಾತಿ ರಾಜಕಾರಣ ಮಾಡುತ್ತಿದ್ದೇನೆಂದು ಹೇಳುತ್ತಿರುವ ಬಿಜೆಪಿಯವರೇ ಮಹಾನ್ ಜಾತಿವಾದಿಗಳು. ಎಲ್ಲದರಲ್ಲೂ ಅವರಿಗೆ ಜಾತಿ-ಧರ್ಮವೇ ಕಾಣುತ್ತದೆ" ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭವಿಷ್ಯದ ಬಗ್ಗೆ ಪ್ಲಾನ್ ಮಾಡುತ್ತೆ, ಉಪಕಾರ ಮಾಡಿದೋರಿಗೆ ಗಿಫ್ಟ್ ನೀಡುತ್ತೆ ಈ ಪಕ್ಷಿ
ಯಮಹಾ ಮ್ಯಾಜಿಕ್: ಭಾರತದ ರಸ್ತೆಗೆ ಇಳಿಯಿತು ಮೊದಲ ಎಲೆಕ್ಟ್ರಿಕ್ ಸ್ಕೂಟರ್; ಒಂದೇ ಚಾರ್ಜ್‌ಗೆ 169 ಕಿ.ಮೀ ಮೈಲೇಜ್!