’ನಾನು ಹಲವು ಭಾಗ್ಯಗಳನ್ನು ಕೊಟ್ಟಿದ್ದೇನೆ; ಬಿಎಸ್’ವೈ ಕೇವಲ ಹರಕಲು ಸೀರೆ ಮುರುಕಲು ಸೈಕಲ್ ಕೊಟ್ರು’

Published : Mar 04, 2018, 03:15 PM ISTUpdated : Apr 11, 2018, 12:38 PM IST
’ನಾನು ಹಲವು ಭಾಗ್ಯಗಳನ್ನು ಕೊಟ್ಟಿದ್ದೇನೆ; ಬಿಎಸ್’ವೈ ಕೇವಲ ಹರಕಲು ಸೀರೆ ಮುರುಕಲು ಸೈಕಲ್ ಕೊಟ್ರು’

ಸಾರಾಂಶ

ಬಿಜೆಪಿಯವರು ಎಷ್ಟೇ  ನಾಟಕ ಆಡಿದ್ರೂ ಜನರು ನಂಬಲ್ಲ.  ಬೆಂಗಳೂರು ರಕ್ಷಿಸಿ ಎಂದು ಬಿಜೆಪಿ ಪಾದಯಾತ್ರೆ ಮಾಡುತ್ತಿದ್ದಾರೆ.  ಬಿಜೆಪಿಯಿಂದ ಬೆಂಗಳೂರು ಉಳಿಸಿದ್ರೆ ಸಾಕಾಗಿದೆ ಎಂದು ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಮಾ. ೦4):  ಬಿಜೆಪಿಯವರು ಎಷ್ಟೇ  ನಾಟಕ ಆಡಿದ್ರೂ ಜನರು ನಂಬಲ್ಲ.  ಬೆಂಗಳೂರು ರಕ್ಷಿಸಿ ಎಂದು ಬಿಜೆಪಿ ಪಾದಯಾತ್ರೆ ಮಾಡುತ್ತಿದ್ದಾರೆ.  ಬಿಜೆಪಿಯಿಂದ ಬೆಂಗಳೂರು ಉಳಿಸಿದ್ರೆ ಸಾಕಾಗಿದೆ ಎಂದು ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಬಿಜೆಪಿ ಅವಧಿಯಲ್ಲಿ ಗಾರ್ಡನ್ ಸಿಟಿ ಇದ್ದದ್ದು ಗಾರ್ಬೆಜ್ ಸಿಟಿಯಾಗಿತ್ತು. ರಾತ್ರಿಯಲ್ಲಿ ಗುತ್ತಿಗೆ ಕರೆದಿದ್ದರು. ಅಶೋಕ್  ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದರು. ಬಿಬಿಎಂಪಿ ಕಟ್ಟಡಗಳನ್ನ ಅಡ ಇಟ್ಟು ಹೋಗಿದ್ರು.  ಅಡ ಇಟ್ಟ ಕಟ್ಟಡಗಳನ್ನ ನಾವು ಬಿಡಿಸಿಕೊಂಡಿದ್ದೇವೆ.  ಬಿಜೆಪಿಯವರು ಲೂಟಿ ಹೊಡೆದು ಹೋಗಿದ್ದಾರೆ. ಮಾನಗೆಟ್ಟವರು ಎಂದು ಟೀಕಿಸಿದ್ದಾರೆ.  ಪ್ರಧಾನಿ ಇಲ್ಲಿಗೆ ಬಂದಂತಹ ಸಂದರ್ಭದಲ್ಲಿ ಅಭಿವೃದ್ಧಿ ಬಗ್ಗೆ ಮಾತನಾಡಿಲ್ಲ.  ನಮ್ಮ ಸರ್ಕಾರವನ್ನ 10  ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಆರೋಪ ಮಾಡುತ್ತಾರೆ.  ಚೆಕ್ ಮುಖಾಂತರ ಲಂಚ ತೆಗದುಕೊಂಡು ಯಡಿಯೂರಪ್ಪ ಜೈಲಿಗೆ ಹೋಗಿದ್ರು. ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ನಮ್ಮ ಮೇಲೆ ಆರೋಪ ಮಾಡುತ್ತಾರೆ.  ಪ್ರಧಾನಿ ಮಾನಗೆಟ್ಟ ಹೇಳಿಕೆ ನೀಡಿದ್ದಾರೆ
ಪ್ರಧಾನಿ ಹುದ್ದೆಗೆ ಮೋದಿ ಅಗೌರವ ತಂದಿದ್ದಾರೆ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. 

ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುತ್ತಾರೆ. ಅವರು ಗಾಂಭೀರ್ಯವಾಗಿ ಮಾತಾಡ್ತಾರೆ ಅಂದುಕೊಂಡ್ರೆ ಅವರಲ್ಲಿ ಗಾಂಭೀರ್ಯತೆನೇ ಇಲ್ಲ. ನಾನು ಹಲವು ಭಾಗ್ಯಗಳನ್ನ ಕೊಟ್ಟಿದ್ದೇನೆ. ಆದ್ರೆ ಯಡಿಯೂರಪ್ಪ ಕೇವಲ ಸೀರೆ ಸೈಕಲ್ ಕೊಟ್ಟು, ತಿರುಗಾ ಮುರಗಾ ಅದನ್ನೇ ಹೇಳ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.  ಜೈಲಿಗೆ ಹೋಗಿರುವವರನ್ನ ಪಕ್ಕದಲ್ಲಿಟ್ಟುಕೊಂಡು ನಮ್ಮ ಬಗ್ಗೆ ಮಾತನಾಡುವ ಮೋದಿ ನಮ್ಮ ಸರ್ಕಾರ ೧೦ ಪರ್ಸೆಂಟ್ ಕಮೀಷನ್ ಸರ್ಕಾರ ಅಂತಾ ಬೇಜವಾಬ್ದಾರಿ ಹೇಳಿಕೆ ಕೊಡ್ತಾರಲ್ಲ ಇದು ಸರಿನಾ ಅಂತಾ ಜನರಿಗೆ ಪ್ರಶ್ನೆ ಹಾಕಿದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?