ವರುಣಾದಲ್ಲಿ ನನ್ನ ಮಗ ನಿಂತರೂ ಸಿಎಂ ಮಗ ಅಂತ ವೋಟು ಹಾಕಲ್ಲ; ವಿಜಯೇಂದ್ರಗೆ ಹಾಕ್ತಾರಾ? ಸಿಎಂ ಟಾಂಗ್

Published : Apr 02, 2018, 11:24 AM ISTUpdated : Apr 14, 2018, 01:13 PM IST
ವರುಣಾದಲ್ಲಿ  ನನ್ನ ಮಗ ನಿಂತರೂ ಸಿಎಂ ಮಗ ಅಂತ ವೋಟು ಹಾಕಲ್ಲ; ವಿಜಯೇಂದ್ರಗೆ ಹಾಕ್ತಾರಾ? ಸಿಎಂ ಟಾಂಗ್

ಸಾರಾಂಶ

ವರುಣ ಕ್ಷೇತ್ರದಲ್ಲಿ ಬಿಎಸ್’ವೈ ಪುತ್ರ  ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ  ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಮೈಸೂರು (ಏ. 02):  ವರುಣ ಕ್ಷೇತ್ರದಲ್ಲಿ ಬಿಎಸ್’ವೈ ಪುತ್ರ  ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ  ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ವಿಜಯೇಂದ್ರ ಯಾಕೆ, ಅವರಪ್ಪ ಯಡಿಯೂರಪ್ಪ ಅವರೇ ಬಂದು ನಿಲ್ಲೋಕೆ ಹೇಳಿ.   ಯಡಿಯೂರಪ್ಪನಿಗೂ ವರುಣ ಕ್ಷೇತ್ರಕ್ಕೂ ಸಂಬಂಧವೇನು ? ಅವರು ಬಂದು ನಿಂತ ತಕ್ಷಣ ಜನ ಓ... ಅಂತ ಓಡಿ ಬರ್ತಾರಾ? ನನ್ನ ಮಗ ಚುನಾವಣೆಗೆ ನಿಂತರೂ ಸಿಎಂ ಮಗ ಅಂತ ವೋಟು ಹಾಕೋದಿಲ್ಲ.  ಸಿಎಂ ಆಗಿ ನಾನು ಏನು ಕೆಲಸ ಮಾಡಿದ್ದೀನಿ ಅನ್ನೋದರ ಮೇಲೆ ವೋಟು ಹಾಕ್ತಾರೆ.  ವರುಣ ಕ್ಷೇತ್ರದ ಜನರ ಕಷ್ಟಕ್ಕೆ ಸ್ಪಂದಿಸಿರೋದು ನಾನು. ಆ ಕ್ಷೇತ್ರದಲ್ಲಿ ಕೆಲಸ ಮಾಡಿರೋದು ನಾನು. ಯಾರೋ ಬಂದು ನಿಂತ ತಕ್ಷಣ ಅಲ್ಲಿನ ಜನ ಬದಲಾಗೋದಿಲ್ಲ. ಜನರಿಗೆ ಯಾರಿಗೆ ವೋಟು ಹಾಕಬೇಕು ಅಂತ ಗೊತ್ತಿದೆ ಎಂದು ಸಿಎಂ ಹೇಳಿದ್ದಾರೆ. 

ಮಾಜಿ ಮುಖ್ಯಮಂತ್ರಿಗಳ ಮಕ್ಕಳು ನಿಂತು ಗೆಲ್ಲೋದಾಗಿದ್ರೆ ಯಾರ್ಯಾರೊ ಎಲ್ಲೆಲ್ಲೊ ನಿಲ್ಲುತ್ತಿದ್ರು.  ವಿಜಯೇಂದ್ರ ಬಗ್ಗೆ ನನ್ನ ಬಳಿ ಪ್ರಶ್ನೆಯನ್ನೇ ಕೇಳಬೇಡಿ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ಮಾತ್ರವಲ್ಲ ಮೆಕ್ಸಿಕೋದಲ್ಲೂ ಅದೇ ಕತೆ, ಸದನದಲ್ಲೇ ಜುಟ್ಟು ಹಿಡಿ ಎಳೆದಾಡಿದ ನಾಯಕಿಯರು
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು; ಬೆಳಗಾವಿ ಸರ್ಕ್ಯೂಟ್ ಹೌಸ್‌ಗೆ ಗಣ್ಯರ ದಂಡು!