
ಹಾಸನ (ಮಾ. 22): ಸಿಎಂ ಆದ 24 ಗಂಟೆಗಳಲ್ಲಿ ಸಾಲ ಮನ್ನಾ ಮಾಡುತ್ತೇನೆ ಅಂತ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಆದರೆ ಅವರು ಸಿಎಂ ಆಗಿದ್ದಾಗ, ಅವರ ತಂದೆ ಸಿಎಂ ಆಗಿದ್ದಾಗ ಏಕೆ ಮಾಡಲಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಎಚ್’ಡಿಕೆಗೆ ನೇರ ಪ್ರಶ್ನೆ ಕೇಳಿದ್ದಾರೆ.
ದಲಿತರನ್ನು, ಮುಸ್ಲಿಂರನ್ನು ಡಿಸಿಎಂ ಮಾಡುತ್ತೇವೆ ಅಂತಿದ್ದಾರೆ. ಆದರೆ ದಲಿತರನ್ನು ಸಿಎಂ ಮಾಡುತ್ತೇವೆ ಎಂದು ದೇವೇಗೌಡರು ಹೇಳಲಿ ಎಂದು ಸವಾಲು ಹಾಕಿದ್ದಾರೆ.
ಹಾಸನದಲ್ಲಿ 7 ಕ್ಕೆ 7 ಸ್ಥಾನ ಗೆಲ್ಲಿಸಿದ್ರೆ ನೀವು ಇತಿಹಾಸ ಬರೆಯುತ್ತೀರಿ. ಜೆಡಿಎಸ್'ನವರು ಸುಳ್ಳು ಹೇಳಿ ಜನರಿಗೆ ಮೋಸ ಮಾಡಲು ಆಗಲ್ಲ. ಯಡಿಯೂರಪ್ಪ ನಾನೇ ಸಿಎಂ ಅನ್ನುತ್ತಿದ್ದಾರೆ. ಬಿಜೆಪಿ 150 ಮಿಶನ್ ಮಾತು ಈಗ 50 ಕ್ಕೆ ಇಳಿದಿದೆ. ಬಿಜೆಪಿಯವರು ಏನೇ ತಂತ್ರಗಾರಿಕೆ ಮಾಡಲಿ, ಕುಮಾರಸ್ವಾಮಿ ಭ್ರಮೆಯಲ್ಲಿರಲಿ, ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ ಎಂದು ಸಿದ್ದರಾಮಯ್ಯ ಆತ್ಮ ವಿಶ್ವಾಸದಿಂದ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.