ಈ ಸಲವೂ ಜೆಡಿಎಸ್‌ ಬಿಜೆಪಿ ಜತೆ ಕೈಜೋಡಿಸುತ್ತೆ: ಸಿದ್ದು

Published : Mar 27, 2018, 09:30 AM ISTUpdated : Apr 11, 2018, 12:58 PM IST
ಈ ಸಲವೂ ಜೆಡಿಎಸ್‌ ಬಿಜೆಪಿ ಜತೆ ಕೈಜೋಡಿಸುತ್ತೆ: ಸಿದ್ದು

ಸಾರಾಂಶ

ಜೆಡಿಎಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್‌ ಜಾತ್ಯತೀತ ಪಕ್ಷವಾಗಿ ಉಳಿದಿಲ್ಲ. ಈ ಹಿಂದೆ ಜೆಡಿಎಸ್‌ನವರು ಬಿಜೆಪಿ ಜತೆ ಕೈಜೋಡಿಸಿ ಸರ್ಕಾರ ನಡೆಸಿದ್ದರು. ಈ ಬಾರಿಯೂ ಬಿಜೆಪಿ ಜೊತೆ ಕೈ ಜೋಡಿಸುತ್ತಾರೆ. ಜೆಡಿಎಸ್‌ ಒಂದು ಅವಕಾಶವಾದಿ ಪಕ್ಷ ಎಂದು ಹರಿಹಾಯ್ದಿದ್ದಾರೆ.

ಮೈಸೂರು : ಜೆಡಿಎಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್‌ ಜಾತ್ಯತೀತ ಪಕ್ಷವಾಗಿ ಉಳಿದಿಲ್ಲ. ಈ ಹಿಂದೆ ಜೆಡಿಎಸ್‌ನವರು ಬಿಜೆಪಿ ಜತೆ ಕೈಜೋಡಿಸಿ ಸರ್ಕಾರ ನಡೆಸಿದ್ದರು. ಈ ಬಾರಿಯೂ ಬಿಜೆಪಿ ಜೊತೆ ಕೈ ಜೋಡಿಸುತ್ತಾರೆ. ಜೆಡಿಎಸ್‌ ಒಂದು ಅವಕಾಶವಾದಿ ಪಕ್ಷ ಎಂದು ಹರಿಹಾಯ್ದಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸರ್ಕಾರ ರಚಿಸಿದಾಗ ಎಚ್‌.ಡಿ. ದೇವೇಗೌಡರು ನನ್ನ ಶವದ ಮೇಲೆ ಸರ್ಕಾರ ರಚಿಸಿ ಎಂದಿದ್ದರು. ಇಪ್ಪತ್ತು ತಿಂಗಳು ಅಧಿಕಾರ ಅನುಭವಿಸಿದ ಬಳಿಕ ನನ್ನ ಮಗ ಪಕ್ಷ ಉಳಿಸುವ ಕೆಲಸ ಮಾಡಿದ್ದಾನೆ ಎಂದು ಅವರೇ ಹೇಳಿದರು. ಈಗ ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಜನಾರ್ಶೀವಾದ ಯಾತ್ರೆ ಹಾಗೂ ಸಮಾವೇಶಕ್ಕೆ ನಿರೀಕ್ಷೆಗೂ ಮೀರಿ ಜನ ಬಂದಿದ್ದಾರೆ. ಮುಂದಿನ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಹಂತದ ಶಿಫಾರಸು ಸಭೆ ನಡೆಸುತ್ತೇವೆ. ಅಂತಿಮವಾಗಿ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿಬಿಡುಗಡೆ ಮಾಡಲಿದೆ. ರಾಹುಲ… ಗಾಂಧಿ ಮಲೆನಾಡು ಭಾಗದಲ್ಲಿ ಏಪ್ರಿಲ… ಮೊದಲನೇ ವಾರ ಜನಾಶೀರ್ವಾದ ಪ್ರವಾಸ ಕೈಗೊಳ್ಳಲಿದ್ದಾರೆ. ಏ.6ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೀಸಲಾತಿಯನ್ನು ಬೆಂಬಲಿಸಿದ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್​ ಗೇಟ್ಸ್​: ಆದ್ರೆ ಇಲ್ಲೊಂದಿದೆ ಸಕತ್​ ಟ್ವಿಸ್ಟ್​
ಬೆಳಿಗ್ಗೆ ವೇಕ್-ಅಪ್ ಕಾಲ್, ಮನೆ ಬಾಗಿಲಿಗೇ ಕಾರ್: ಬೆಂಗಳೂರು ಏರ್‌ಪೋರ್ಟ್‌ನಿಂದ ಡೋರ್-ಟು-ಡೋರ್ ಐಷಾರಾಮಿ ಸೇವೆ