
ಬೆಂಗಳೂರು (ಮಾ.24): ಚುನಾವಣೆ ಭಾಷಣ ಮಾಡಲಿಕ್ಕಾಗಿ ನರೇಂದ್ರಮೋದಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಬರುತ್ತಾರೆ. ಅದಕ್ಕೆ ನಮ್ಮ ತಕರಾರಿಲ್ಲ. ಆದರೆ ಅವರು ಅಭಿವೃದ್ದಿ ಬಗ್ಗೆ ಮಾತನಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮದು ಅಭಿವೃದ್ದಿ ಅಜೆಂಡಾ. ಅವರದ್ದು ಕೋಮುವಾದಿ ಅಜೆಂಡಾ. ಬಿಜೆಪಿಯವರು ಮೂರು ಜನ ಮುಖ್ಯಮಂತ್ರಿ ಆಗಿದ್ದರೂ ಸುಭದ್ರ ಸರಕಾರ ನೀಡುವುದಕ್ಕೆ ಆಗಲಿಲ್ಲ. ನಾವು ಐದು ವರ್ಷದಲ್ಲಿ ಸುಭದ್ರ ಸರಕಾರ ನೀಡಿದ್ದೇವೆ. ನರೇಂದ್ರ ಮೋದಿಯವರು ಜೈಲಿಗೆ ಹೋಗಿ ಬಂದವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಭ್ರಷ್ಟಚಾರದ ಬಗ್ಗೆ ಮಾತನಾಡುತ್ತಾರೆ. ಇವರಿಗೆ ಏನಾದರೂ ಮಾನ ಮರ್ಯಾದೆ ಇದೆಯಾ? ಉದ್ಯಮಿಗಳು ಸಾವಿರಾರು ಕೋಟಿ ಹಣ ಲೂಟಿ ಹೊಡೆದು ವಿದೇಶಕ್ಕೆ ಓಡಿ ಹೋದರು. ಮೋದಿ ಚೌಕಿದಾರರಾಗಿ ಏಕೆ ಅವರನ್ನು ತಡೆಯಲು ಆಗಲಿಲ್ಲ. ಬಿಜೆಪಿಯವರಿಗೆ ಒಂದು ನಾಲಿಗೆ ಇಲ್ಲ. ಹೇಳೋದು ಒಂದು ಮಾಡೋದು ಇನ್ನೊಂದು. ಅಚ್ಚೆ ದಿನ್ ಯಾರಿಗೆ ಬಂದಿದೆ? ಮಲ್ಯ, ಲಲಿತ್ ಮೋದಿ, ಅಂಬಾನಿ, ಅದಾನಿ, ಜೈಷಾ ಅವರಿಗೆ ಬಂದಿದೆ. ಧೀನ ದಲಿತರಿಗೆ, ಬಡವರಿಗೆ ಅಚ್ಚೆದಿನ್ ಬಂದಿಲ್ಲ ಎಂದು ಸಿಎಂ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.