
ಮೈಸೂರು: ಪ್ರಚಾರ ಸಂದರ್ಭದಲ್ಲಿ ತಾಲೂಕಿನ ಮಾವಿನಹಳ್ಳಿಯ ಕಾರ್ಯಕರ್ತ ರಾಮೇಗೌಡ ಅವರ ಮನೆಯಲ್ಲಿ ಸೋಮವಾರ ಸಂಜೆ ತಿಂಡಿ ತಿನ್ನುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರ್ಚಿಯಿಂದ ಆಯತಪ್ಪಿ ಕೆಳಗೆ ಬಿದ್ದಿದ್ದು ತಲೆಗೆ ಸಣ್ಣ ಗಾಯವಾಗಿದೆ.
ಬೀಳುವ ವೇಳೆ ಹಿಂಬದಿ ಇದ್ದ ಷೋಕೇಸ್ಗೆ ತಲೆಗೆ ತಾಗಿತ್ತು. ಈ ವೇಳೆ ಸ್ಥಳದಲ್ಲೇ ಇದ್ದ ಪುತ್ರ ಡಾ.ಯತೀಂದ್ರ ತಕ್ಷಣ ಪರೀಕ್ಷಿಸಿದ್ದಾರೆ. ಏನೂ ತೊಂದರೆ ಇಲ್ಲವೆಂದ ಬಳಿಕ ಮತ್ತೆರಡು ಗ್ರಾಮಗಳಲ್ಲಿ ಪ್ರಚಾರ ಕಾರ್ಯ ಮುಂದುವರೆಸಿದರು. ನಂತರ ಮೈಸೂರಿಗೆ ತೆರಳಿ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆಗೊಳಗಾಗಿ ಬೆಂಗಳೂರಿಗೆ ತೆರಳಿದರು ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.