
ಬೆಂಗಳೂರು: ಕನ್ನಡ ಕಲಿಯೋದಿಲ್ವಾ ಅಮಿತ್ ಶಾ ಅವರೇ..? ಇದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ತಮಿಳು, ಬಂಗಾಳಿ ಭಾಷೆ ಕಲಿಯುತ್ತಿ ದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಟ್ವೀಟರ್ ಮೂಲಕ, ಕನ್ನಡ ಕಲಿಯೋದಿಲ್ವಾ ಅಮಿತ್ ಶಾ ಅವರೇ ಎಂದು ಟಾಂಗ್ ನೀಡಿದ್ದಾರೆ.
ಸಿ.ಟಿ.ರವಿ ತಿರುಗೇಟು: ಸಿದ್ದರಾಮಯ್ಯ ಅವರ ಈ ಟಾಂಗ್ಗೆ ತಿರುಗೇಟು ನೀಡಿರುವ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಸಿ.ಟಿ. ರವಿ, ರಾಜ್ಯೋತ್ಸವ ದಿನದಂದು ಕನ್ನಡಿಗರಿಗೆ ಶುಭ ಕೋರದ ರಾಹುಲ್ ಗಾಂಧಿರನ್ನು ಪ್ರಶ್ನಿಸದ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರಿಗೆ ಕನ್ನಡ ಕಲಿಯೋದಿಲ್ವಾ ಎಂದು ಪ್ರಶ್ನಿಸಿರುವುದು ಬೂಟಾಟಿಕೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.