
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ತಮ್ಮದೇ ನೇತೃತ್ವ ಎಂಬುದನ್ನು ದೃಢಪಡಿಸಲು ಸಜ್ಜಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ. 15 ರಿಂದ ಜ. 15ರವರೆಗೂ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಮುಟ್ಟುವ ಪ್ರಚಾರ ಯಾತ್ರೆ ಆರಂಭಿಸಲು ನಿರ್ಧರಿಸಿದ್ದಾರೆ.
ಒಂದು ತಿಂಗಳ ಅವಧಿಯ ಈ ಪ್ರಚಾರ ಯಾತ್ರೆ ವೇಳೆ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸಮಾವೇಶ ನಡೆಸುವ ಗುರಿ ಹೊಂದಿದ್ದು, ಇದಕ್ಕಾಗಿ ರೂಪರೇಷೆ ಸಿದ್ಧಪಡಿಸಲಾಗುತ್ತಿದೆ.
ಚುನಾವಣೆ ಹತ್ತಿರವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿರುವ ಮೊದಲ ಅಧಿಕೃತ ಚುನಾವಣಾ ರ್ಯಾಲಿ ಇದಾಗಿದ್ದು, ಚುನಾವಣಾ ಪ್ರಚಾರ ಸಭೆಗಳ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಎಲ್ಲಾ ಶಾಸಕರಿಗೂ ಸೂಚನೆ ನೀಡಲಾಗಿದೆ.
ರಾಹುಲ್ ಗಾಂಧಿ ಆಗಮನ: ಮುಖ್ಯಮಂತ್ರಿಯವರ ರಾಜ್ಯ ಪ್ರವಾಸಕ್ಕೂ ಮುನ್ನ ಕೆಪಿಸಿಸಿಯು ರಾಜ್ಯದ ನಾಲ್ಕೂ ವಿಭಾಗಗಳಲ್ಲಿ ವಿಭಾಗೀಯ ಮಟ್ಟದ ಸಮಾವೇಶಗಳನ್ನು ನಡೆಸಲಿದೆ. ಜತೆಗೆ ಒಂದು ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸಲು ಶುಕ್ರವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಜತೆಗೆ, ಬೂತ್ಮಟ್ಟದ ಕಾರ್ಯಕರ್ತರಿಗೆ ಉತ್ಸಾಹ ತುಂಬುವ ಸಲುವಾಗಿ ಬೆಂಗಳೂರಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ರಾಜ್ಯ ಮಟ್ಟದ ಸಭೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಈ ಸಭೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಅವರು ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.