ಲಿಂಗಾಯಿತ ಪ್ರತ್ಯೇಕ ಧರ್ಮ; ಕುತೂಹಲ ಮೂಡಿಸಿದೆ ಸಿಎಂ ನಿರ್ಧಾರ

Published : Mar 18, 2018, 08:30 PM ISTUpdated : Apr 11, 2018, 12:51 PM IST
ಲಿಂಗಾಯಿತ ಪ್ರತ್ಯೇಕ ಧರ್ಮ; ಕುತೂಹಲ ಮೂಡಿಸಿದೆ ಸಿಎಂ ನಿರ್ಧಾರ

ಸಾರಾಂಶ

ಚುನಾವಣೆ ಹೋಸ್ತಿಲ್ಲಿರುವ ರಾಜ್ಯ ಕರ್ನಾಟಕ. ಆದ್ರಿಗ ಚುನಾವಣೆ ಕಾವು ಏರುತ್ತಿದಂತೆ, ಪ್ರತ್ಯೇಕ ಲಿಂಗಾಯತ ಧರ್ಮ ರಚನೆಗಾಗಿ ಪರ - ವಿರೋಧದ ಕಾವು ಅಷ್ಟೇ ಜೋರಾಗಿದೆ. ಈ ಮಧ್ಯೆ ಲಿಂಗಾಯತ ಪ್ರತ್ಯೇಕತೆಗಾಗಿ ತೋಂಟದಾರ್ಯ ಸ್ವಾಮೀಜಿ ಮತ್ತು ಚಿತ್ರದುರ್ಗ ಮುರಗ ಶ್ರೀಗಳ ನೇತೃತ್ವದ 300 ಕ್ಕೂ ಹೆಚ್ಚು ಸ್ವಾಮೀಜಿಗಳ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಪ್ರತ್ಯೇಕ ಲಿಂಗಾಯತ ಧರ್ಮ ರಚನೆ ಆಗಲೇಬೇಕೆಂದು ಒತ್ತಡ ಹೇರಿದ್ದಾರೆ. 

ಬೆಂಗಳೂರು (ಮಾ. 18): ಚುನಾವಣೆ ಹೋಸ್ತಿಲ್ಲಿರುವ ರಾಜ್ಯ ಕರ್ನಾಟಕ. ಆದ್ರಿಗ ಚುನಾವಣೆ ಕಾವು ಏರುತ್ತಿದಂತೆ, ಪ್ರತ್ಯೇಕ ಲಿಂಗಾಯತ ಧರ್ಮ ರಚನೆಗಾಗಿ ಪರ - ವಿರೋಧದ ಕಾವು ಅಷ್ಟೇ ಜೋರಾಗಿದೆ. ಈ ಮಧ್ಯೆ ಲಿಂಗಾಯತ ಪ್ರತ್ಯೇಕತೆಗಾಗಿ ತೋಂಟದಾರ್ಯ ಸ್ವಾಮೀಜಿ ಮತ್ತು ಚಿತ್ರದುರ್ಗ ಮುರಗ ಶ್ರೀಗಳ ನೇತೃತ್ವದ 300 ಕ್ಕೂ ಹೆಚ್ಚು ಸ್ವಾಮೀಜಿಗಳ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಪ್ರತ್ಯೇಕ ಲಿಂಗಾಯತ ಧರ್ಮ ರಚನೆ ಆಗಲೇಬೇಕೆಂದು ಒತ್ತಡ ಹೇರಿದ್ದಾರೆ. 

ಸ್ವಾಮೀಜಿಗಳ ಮನವಿಯನ್ನು ಸಮಚಿತ್ತದಿಂದ ಆಲಿಸಿದ ಸಿಎಂ ಸಿದ್ದರಾಯಮಯ್ಯ ಆಶಾವಾದಿಗಳಾಗಿರಿ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯರ ಈ ಹೇಳಿಕೆ ಸಾಕಷ್ಟು ಕುತೂಹಲಕ್ಕೆ ಮೂಡಿಸಿದೆ. ಕಾರಣ ನಾಳೆ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು ಸಿಎಂ ಸಿದ್ದರಾಮಯ್ಯರು ಯಾವ ತಿರ್ಮಾನಕ್ಕೆ ಬರ್ತಾರೆ ಎನ್ನುವ ಕುತೂಹಲ ಹೆಚ್ಚಿಸಿದೆ. 

 ಈಗಾಗಲೇ ವೀರಶೈವ ಮಹಾಸಭಾ ಸೇರಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ ಪ್ರತಿಕ್ರಿಯೆ ನೀಡಿರುವ ಸಚಿವ ವಿನಯ್ ಕುಲ್ಕರ್ಣಿ ಸಂಪುಟ ಸಹದ್ಯೋಗಿಗಳಿಗೆ ನೇರ ಸವಾಲು ಏಸೆದಿದ್ದಾರೆ. ಇಬ್ಬರು ಸಚಿವರು ರಾಜೀನಾಮೆ ನೀಡಿದ್ರೆ ಏನು ಆಗೋದಿಲ್ಲ ಎನ್ನುವ ಮೂಲಕ ಈಶ್ವರ ಖಂಡ್ರೆ, ಎಸ್ ಎಸ್ ಮಲ್ಲಿಖಾರ್ಜುನರಿಗೆ ಟಾಂಗ್ ನೀಡಿದ್ದಾರೆ.

ಉರಿಯುವ ಬೆಂಕಿಗೆ ತುಪ್ಪ ಸುರಿದ್ರು ಎನ್ನೋ ಹಾಗೆ ವಿನಯ್ ಕುಲ್ಕರ್ಣಿ ನೇರ ಮಾತು ಸಿದ್ದರಾಮಯ್ಯರಿಗೆ ತಲೆ ನೋವಾಗಿದೆ. ನಾಳಿನ ಸಚಿವ ಸಂಪುಟ ಸಭೆಯಲ್ಲಿ ರಾಜೀನಾಮೆ ಪ್ರಹಸನದ ಮಾತು ಮತ್ತೆ ಕಿತ್ತಾಟಕ್ಕೆ ಕಾರಣವಾಗಬಹುದು. ಈ ಮಧ್ಯೆ ಚುನಾವಣೆ ಸಮಯದಲ್ಲಿ ಮತ್ತೆ ರಂಪಾಟ ಯಾಕೆಂದು, ಸಿಎಂ ಸಿದ್ದರಾಮಯ್ಯ ನಾಗಮೋಹನ್ ದಾಸ್ ನೀಡಿರುವ ವರದಿಗೆ ಪ್ರತಿಯಾಗಿ ಮತ್ತೊಂದು ಉಪ ಸಮಿತಿ ರಚಿಸಬಹುದು. ಆ ಮೂಲಕ ಸಮಯ ದೂಡುವ ತಂತ್ರಕ್ಕೆ ಮುಂದಾಗಬಹುದು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಲಂಡನ್‌ ಬೀದಿಯಲ್ಲಿ ಆಟೋರಿಕ್ಷಾ..' ಕೊನೆಗೂ ಇಂಗ್ಲೆಂಡ್ ಮೇಲೆ ನಮ್ಮ ರಾಜ್ಯಭಾರ ಶುರು ಎಂದ ನೆಟ್ಟಿಗರು!
ಹಿಮಾಚಲದಲ್ಲಿ ಆರ್ಥಿಕ ಬಿಕ್ಕಟ್ಟು: 6 ತಿಂಗಳು ವೇತನ ಕಡಿತ ಘೋಷಿಸಿದ ಸಿಎಂ ಸುಖ್ವಿಂದರ್ ಸಿಂಗ್!