
ಬೆಂಗಳೂರು(ನ.15): ಕೇಂದ್ರ ಸರ್ಕಾರ ಪ್ರಚಾರಕ್ಕಾಗಿ 500, ಸಾವಿರ ನೋಟು ಮುಖಬೆಲೆಯ ನೋಟನ್ನು ರದ್ದುಗೊಳಿಸಿದೆ ಅಂತಾ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ಪ್ರಧಾನಿಗೂ ಪತ್ರ ಬರೆದಿದ್ದಾರೆ.
ಸಿದ್ದತೆ ಇಲ್ಲದೇ ನೋಟ್ ಬ್ಯಾನ್ ಮಾಡಿರುವುದರಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಹೀಗಾಗಿ ಹಳೆಯ 500, 1000 ನೋಟು ಚಲಾವಣೆಯನ್ನು ಡಿ.30ರವರೆಗೆ ವಿಸ್ತರಿಸಿ ಹೊಸ 500 ರೂಪಾಯಿ ನೋಟನ್ನು ಬೇಗ ಚಲಾವಣೆಗೆ ತರಬೇಕು. ಖಾಸಗಿ ಆಸ್ಪತ್ರೆಗಳು, ಬ್ಲಡ್ ಬ್ಯಾಂಕ್ಗಳಲ್ಲಿ ಹಳೆಯ ನೋಟು ಚಲಾವಣೆಗೆ ಸೂಚನೆ ನೀಡಬೇಕು. ಸಣ್ಣ ಉದ್ದಿಮೆದಾರರು, ಗ್ರಾಹಕರ ಬಿಲ್ ಪಾವತಿಗೂ ಹಳೆಯ ನೋಟಿಗೆ ಅವಕಾಶ ಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.