
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುದ್ದಿ ಕೇಳಿ ಆಘಾತವಾಗಿದೆ. ಇದೊಂದು ಹೇಯ ಕೃತ್ಯ.ಇಡೀ ನಾಗರೀಕ ಸಮಾಜ ತಲೆತಗ್ಗಿಸುವ ಘಟನೆ ಎಂದು ಹೇಳಿದ್ದಾರೆ.
ಪೊಲೀಸರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ, ದುಷ್ಕರ್ಮಿಗಳ ಪತ್ತೆಗಾಗಿ 3 ತಂಡಗಳನ್ನು ರಚಿಸಲಾಗಿದೆ. ತನಿಖೆ ಆರಂಭವಾಗಿದೆ. ಆದಷ್ಟು ಬೇಗ ಹಂತಕರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಅವರಿಗೆ ಜೀವ ಬೆದರಿಕೆ ಇದೆ ಎಂದು ನನಗೆ ಮಾಹಿತಿ ಇರಲಿಲ್ಲ. ರಕ್ಷಣೆಯನ್ನು ಕೂಡಾ ಕೋರಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮಾನವೀಯತೆ ಇರುವವರು ಇಂತಹ ಕೃತ್ಯ ಎಂದಿಗೂ ಮಾಡಲ್ಲ, ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ಸರ್ಕಾರ ಬಂದ ಮೇಲೆ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತಂದಿದ್ದಾರೆ, ಎಂದು ಸಿಎಂ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.