
ಮೈಸೂರು(ಸ.06): ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂದಿತರಾಗಿದ್ದ ಮರಿಗೌಡ, ಇಂದು ಮೈಸೂರಿನಲ್ಲಿ ಸಿಎಂ ಜೊತೆ ಕಾಣಿಸಿಕೊಂಡಿದ್ದಾರೆ. ಆದರೆ ಆಪ್ತ ಮರಿಗೌಡನನ್ನು ಮಾತ್ರ ಸಿಎಂ ಸಿದ್ರಾಮಯ್ಯ ಖ್ಯಾರೆ ಅನ್ನಲಿಲ್ಲ.
ವರುಣಾ ವಿಧಾನಸಭಾ ಕ್ಷೇತ್ರ ಪ್ರವಾಸದಲ್ಲಿರುವ ಸಿಎಂ ಇಂದು ಮೈಸೂರಿಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಾಗನಿಂದಲೂ ಹಿಂದೆಯೇ ಹೋದ ಮರಿಗೌಡನನ್ನು ಹತ್ತಿರ ಕರೆದುಕೊಳ್ಳಲು ಮಾತ್ರ ಸಿಎಂ ಮನಸ್ಸು ಮಾಡಿಲ್ಲ. ವರುಣಾ ವಿಧಾನಸಭಾ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿಸಲು ಪ್ರಯತ್ನಿಸಿದರೂ ತಿರುಗಿ ನೋಡದ ಸಿಎಂ ಆಪ್ತ ಮರಿಗೌಡನನ್ನು ದೂರವಿಟ್ಟ ಪ್ರಸಂಗ ನಡೆಯಿತು.
ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಜೈಲು ಸೇರಿದ್ದ ಮರಿಗೌಡನನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.