ಮಹದಾಯಿ ವಿಚಾರದಲ್ಲಿ ಪರಿಕ್ಕರ್, ಬಿಎಸ್'ವೈ ಪೊಲಿಟಿಕಲ್ ಸ್ಟಂಟ್ ಮಾಡಿದ್ದಾರೆ: ಸಿಎಂ

Published : Dec 28, 2017, 04:34 PM ISTUpdated : Apr 11, 2018, 01:07 PM IST
ಮಹದಾಯಿ ವಿಚಾರದಲ್ಲಿ ಪರಿಕ್ಕರ್, ಬಿಎಸ್'ವೈ ಪೊಲಿಟಿಕಲ್ ಸ್ಟಂಟ್ ಮಾಡಿದ್ದಾರೆ: ಸಿಎಂ

ಸಾರಾಂಶ

ಮಹದಾಯಿ ವಿವಾದ ಮಾತುಕತೆ ಮೂಲಕವೇ ಬಗೆಹರಿಯಬೇಕು.  ಮಾತುಕತೆಗೆ ಕರ್ನಾಟಕ ಸರ್ಕಾರ ತಯಾರಿದೆ.  ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಲಿ ಎಂದು ಶಿರಾದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತುಮಕೂರು (ಡಿ.28): ಮಹದಾಯಿ ವಿಚಾರದಲ್ಲಿ ಮನೋಹರ್ ಪರಿಕ್ಕರ್ ಹಾಗೂ ಯಡಿಯೂರಪ್ಪ ಇಬ್ಬರು ಸೇರಿಕೊಂಡು ಪೊಲಿಟಿಕಲ್ ಸ್ಟಂಟ್ ಮಾಡಿದ್ದಾರೆ. ಹಾಗಂತ ಗೋವಾ ನೀರಾವರಿ ಸಚಿವರೇ ಹೇಳಿರುವುದಾಗಿ  ಸಿಎಂ ಸಿದ್ದರಾಮಯ್ಯ ಶಿರಾದಲ್ಲಿ ಹೇಳಿದ್ದಾರೆ.

ನಾನೇ ಬಂದು ಮಾತಾಡ್ತೀನಿ ಅಂತ ಪತ್ರ ಬರೆದಿದ್ದೆ. ಆದರೆ ಚುನಾವಣೆ ನಂತರ ಬನ್ನಿ ಅಂತಾ ಪರಿಕ್ಕರ್ ಹೇಳಿದ್ದಾರೆ.  ಇಬ್ಬರ ನಾಟಕದಿಂದ ರೈತರು ಮೋಸಹೋಗಿ ಈಗ ಚಳುವಳಿ ಮಾಡುತ್ತಿದ್ದಾರೆ. ನನಗೆ ರಾಜಕೀಯದಲ್ಲಿ 40 ವರ್ಷಕ್ಕೂ ಹೆಚ್ಚು ಅನುಭವ ಇದೆ.  ಒಂದು ಪಕ್ಷ ಇನ್ನೊಂದು ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಿರೋದು ಇದೇ ಮೊದಲು. ತಪ್ಪು ಮಾಡಿ ಸಿಕ್ಕಿಹಾಕಿಕೊಂಡ ಯಡಿಯೂರಪ್ಪ ಡೈವರ್ಟ್ ಮಾಡುತ್ತಿದ್ದಾರೆ.  ವಿವಾದ ಇತ್ಯರ್ಥಕ್ಕೆ ನಮ್ಮ ಸರ್ಕಾರ ಸಿದ್ದವಿದ್ದು, ಮೋದಿ ಮಾತುಕತೆ ನಡೆಸಬೇಕಿದೆ. ಸದಾಶಿವ ಆಯೋಗ ಜಾರಿಗೆ ಪರ ವಿರೋಧ ಎರಡೂ ಇದೆ. ಸಭೆ ಕರೆದಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಮಹದಾಯಿ ವಿವಾದ ಮಾತುಕತೆ ಮೂಲಕವೇ ಬಗೆಹರಿಯಬೇಕು. ಮಾತುಕತೆಗೆ ಕರ್ನಾಟಕ ಸರ್ಕಾರ ತಯಾರಿದೆ. ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಲಿ ಎಂದು ಶಿರಾದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಚುನಾವಣಾ ಸ್ಪರ್ಧೆ ಬಗ್ಗೆ ಮಾತನಾಡುತ್ತಾ,  ನಾನು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ.  ಬೇರೆ ಯಾವ ಕ್ಷೇತ್ರಕ್ಕೂ ಹೊಗಲ್ಲ.  ನನಗೆ ಟಿಕೆಟ್ ನೀಡೋದು ರಾಹುಲ್ ಗಾಂಧಿ. ವದಂತಿ ಹಬ್ಬಿಸೋರು ಅಲ್ಲ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ
ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!