
ಬೆಂಗಳೂರು (ಸೆ.03): ಪರಮೇಶ್ವರ್ ಅಸಮಾಧಾನ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲಗೆ ಕರೆ ಮಾಡಿ ಪರಮೇಶ್ವರ್ ವಿರುದ್ಧ ದೂರು ನೀಡಿದ್ದಾರೆ.
ಕಳೆದೆರಡು ದಿನಗಳಿಂದ ಪರಮೇಶ್ವರ್ ವರ್ತನೆಯಿಂದ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಮುಜುಗುರವಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯಿಂದ ಸರ್ಕಾರ ಪೇಚಿಗೆ ಸಿಲುಕಿಕೊಂಡಿದೆ. ಈ ಬಗ್ಗೆ ಗೊತ್ತಿದ್ದರೂ ಮಾಧ್ಯಮಗಳಿಗೆ ಪರಮೇಶ್ವರ್ ಪ್ರತಿಕ್ರಿಯೆ ನೀಡುತ್ತಿಲ್ಲ. ಕೂಡಲೇ ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ತಕ್ಷಣವೇ ಪರಮೇಶ್ವರ್'ಗೆ ಕರೆ ಮಾಡಿ ವೇಣುಗೋಪಾಲ್ ತರಾಟೆಗೆ ತಗೆದುಕೊಂಡಿದ್ದಾರೆ. ಕೂಡಲೇ ಸುದ್ದಿಗೋಷ್ಠಿ ಮಾಡಿ ಪ್ರತಿಕ್ರಿಯೆ ನೀಡಲು ವೇಣುಗೋಪಾಲ ಪರಮೇಶ್ವರ್ ಗೆ ತಾಕೀತು ಮಾಡಿದ್ದಾರೆ.
ಪರಿಣಾಮ ತುಮಕೂರಿಗೆ ಪ್ರತ್ಯೇಕ ಕಾರಿನಲ್ಲಿ ತೆರಳಬೇಕಿದ್ದ ಪರಮೇಶ್ವರ್ ಪ್ರಯಾಣ ಅರ್ಧಕ್ಕೆ ಮೊಟಕುಗೊಳಿಸಿ ಕೆಪಿಸಿಸಿಗೆ ಬಂದು ಸುದ್ದಿಗೋಷ್ಠಿ ನಡೆಸಿ ಸಮಜಾಯಿಷಿ ನೀಡಿದರು. ಒಟ್ಟಿನಲ್ಲಿ ಸಿದ್ದರಾಮಯ್ಯ, ಪರಮೇಶ್ವರ ನಡುವಿನ ಮುನಿಸು ತಾರಕಕ್ಕೇರಿದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.