ಹಿಂದುಳಿದ ತಾಲೂಕುಗಳಿಗೆ ಒತ್ತು ನೀಡಲು ಬದ್ಧ :ಸಿಎಂ

Published : Dec 24, 2016, 12:53 PM ISTUpdated : Apr 11, 2018, 01:02 PM IST
ಹಿಂದುಳಿದ ತಾಲೂಕುಗಳಿಗೆ ಒತ್ತು ನೀಡಲು ಬದ್ಧ :ಸಿಎಂ

ಸಾರಾಂಶ

ನಾನು ಅಖಂಡ ಕರ್ನಾಟಕದ ಮುಖ್ಯಮಂತ್ರಿ. ಏಕೀಕರಣ ಆದ ಮೇಲೂ ಹಿಂದುಳಿದ ತಾಲೂಕುಗಳಿಗೆ ಒತ್ತು ಕೊಟ್ಟು ಕೆಲಸ ಮಾಡಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  

ಧಾರವಾಡ (ಡಿ. 24): ನಾನು ಅಖಂಡ ಕರ್ನಾಟಕದ ಮುಖ್ಯಮಂತ್ರಿ. ಏಕೀಕರಣ ಆದ ಮೇಲೂ ಹಿಂದುಳಿದ ತಾಲೂಕುಗಳಿಗೆ ಒತ್ತು ಕೊಟ್ಟು ಕೆಲಸ ಮಾಡಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  

ನಂಜುಡಪ್ಪನವರ ವರದಿಯಂತೆ ಪ್ರತಿವರ್ಷ 3000 ಕೋಟಿ ಖರ್ಚು ಮಾಡಬೇಕು ಅಂದುಕೊಂಡಿದ್ದೇನೆ. ಹೆಚ್ಚು ಹಿಂದುಳಿದ ತಾಲೂಕುಗಳು ಹೈದರಾಬಾದ್ ಕರ್ನಾಟಕದಲ್ಲಿವೆ. ಮೈಸೂರು ರಾಜರು ಪ್ರಗತಿಪರರಾಗಿದ್ದರಿಂದ ಮೈಸೂರು ತಕ್ಕ ಮಟ್ಟಿಗೆ ಅಭಿವೃದ್ದಿಯಾಗಿತ್ತು. ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿಯಾಗಬೇಕು. ಎಲ್ಲಾ ನೀರಾವರಿ ಯೋಜನೆ ಪೂರ್ಣಗೊಳಿಸಬೇಕಾದರೆ ಒಂದು ಲಕ್ಷ ಕೋಟಿ ರೂಪಾಯಿ ಬೇಕು ಮಾತು ಕೊಟ್ಟ ರೀತಿಯಲ್ಲಿ ಖರ್ಚು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.  

ಕಳಸಾ ಬಂಡೂರಿ ಮಹದಾಯಿ ವಿವಾದ ಬಗ್ಗೆ ಪ್ರತಿಕ್ರಿಯೆ

ಮಹದಾಯಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಯಾವುದೇ ಕಾನೂನು ತೊಡಕಿಲ್ಲ. ಅವರು ಮನಸ್ಸು ಮಾಡಬೇಕಷ್ಟೇ ನಾನೂ ಲಾಯರ್ ಆಗಿ ಹೇಳ್ತಿದೇನೆ. ಕಾವೇರಿ ಇರಲಿ, ಕಳಸಾ ಇರಲಿ ರಾಜಕೀಯ ಮಾಡಬಾರದು ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಶುಭಾಷಯ ಕೋರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ