ಸಿಎಂ ಸಿದ್ದರಾಮಯ್ಯಗೆ ಸಹೋದರಿ ವಿಯೋಗ

Published : Oct 07, 2017, 09:56 PM ISTUpdated : Apr 11, 2018, 12:52 PM IST
ಸಿಎಂ ಸಿದ್ದರಾಮಯ್ಯಗೆ ಸಹೋದರಿ ವಿಯೋಗ

ಸಾರಾಂಶ

ಸಿಎಂ ಸಿದ್ದರಾಮಯ್ಯ ಅವರಿಗೆ ಸಹೋದರಿ ವಿಯೋಗವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು  ಸಿಎಂ ಸಹೋದರಿ ಚಿಕ್ಕಮ್ಮ ನಿಧನರಾಗಿದ್ದಾರೆ. 

ಬೆಂಗಳೂರು (ಅ.07): ಸಿಎಂ ಸಿದ್ದರಾಮಯ್ಯ ಅವರಿಗೆ ಸಹೋದರಿ ವಿಯೋಗವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಿಎಂ ಸಹೋದರಿ ಚಿಕ್ಕಮ್ಮ ನಿಧನರಾಗಿದ್ದಾರೆ. 

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಇಂದಿನ ಅಧಿಕೃತ ಕಾರ್ಯಕ್ರಮಗಳು ರದ್ದುಗೊಂಡಿದ್ದವು. ತಮ್ಮೆಲ್ಲ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಸಿಎಂ, ಪುತ್ರ ಯತೀಂದ್ರರ ಜೊತೆ  ಮೈಸೂರಿಗೆ ತೆರಳಿದರು. ಮೈಸೂರಿನ ಸಿದ್ದರಾಮನಹುಂಡಿ ಸಮೀಪ ದೇವೇಗೌಡನಹುಂಡಿಯಲ್ಲಿ  ಚಿಕ್ಕಮ್ಮನ ಅಂತ್ಯಕ್ರಿಯೆ ನೆರವೇರಿತು. ಹಾಲು ಮತದ ಸಂಪ್ರದಾಯದಂತೆ ಸಿಎಂ ಸಹೋದರಿಯ ಅಂತ್ಯಕ್ರಿಯೆ ನೆರವೇರಿಸಿದರು. .ಸೋದರಿ ಕಳೆದುಕೊಂಡ ಸಿಎಂ ಭಾವುಕರಾದರು. ಇನ್ನೂ ಅಂತ್ಯಕ್ರಿಯೆಯಲ್ಲಿ  ಹಲವು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯ ಕರ್ತರು ಕೂಡ ಭಾಗವಹಿಸಿದ್ದರು. ಅಲ್ಲದೇ ಇತ್ತೀಚೆಗೆ ಬಿಜೆಪಿ ತೊರೆಯುವ ಮುನ್ಸೂಚನೆ ನೀಡಿರುವ ವಿಜಯಶಂಕರ್ ಕೂಡ ಗ್ರಾಮಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಂಡ ಹಾಕಿ ಲೈಂಗಿಕ ದೌರ್ಜನ್ಯ ಕೇಸ್ ಮುಚ್ಚಿ ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು! ಏನಿದು ಪ್ರಕರಣ?
ಗ್ರೇಟರ್ ಬೆಂಗಳೂರು: ವೈದ್ಯಕೀಯ ಪರಿಹಾರ ನಿಧಿ ಹಣಕ್ಕೆ ತಡೆ, ಬಡರೋಗಿಗಳ ನೆರವಿಗೆ ಕತ್ತರಿ?