ಸಿದ್ದರಾಮಯ್ಯ ಪಿಎಫ್'ಐ, ಎಸ್'ಡಿಪಿಐ ಕ್ರಿಮಿನಲ್'ಗಳಿಗೆ ಸಾಥ್ ನೀಡುತ್ತಿದ್ದಾರೆ: ಶೆಟ್ಟರ್

Published : Jan 26, 2018, 12:18 PM ISTUpdated : Apr 11, 2018, 01:06 PM IST
ಸಿದ್ದರಾಮಯ್ಯ  ಪಿಎಫ್'ಐ, ಎಸ್'ಡಿಪಿಐ ಕ್ರಿಮಿನಲ್'ಗಳಿಗೆ ಸಾಥ್ ನೀಡುತ್ತಿದ್ದಾರೆ: ಶೆಟ್ಟರ್

ಸಾರಾಂಶ

ಅಲ್ಪಸಂಖ್ಯಾತರ ಮೇಲಿನ ಕೇಸ್ ವಾಪಸ್ ಪಡೆಯಲು ಹೊರಟ ಸರ್ಕಾರದ ನಡೆಗೆ ಬಿಜೆಪಿ ನಾಯಕ ಜಗದೀಶ್  ಶೆಟ್ಟರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.  

ಬೆಂಗಳೂರು (ಜ.26): ಅಲ್ಪಸಂಖ್ಯಾತರ ಮೇಲಿನ ಕೇಸ್ ವಾಪಸ್ ಪಡೆಯಲು ಹೊರಟ ಸರ್ಕಾರದ ನಡೆಗೆ ಬಿಜೆಪಿ ನಾಯಕ ಜಗದೀಶ್  ಶೆಟ್ಟರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.  

ಇದೊಂದು ಸಂವಿಧಾನದ ವಿರೋಧಿ ಕೆಲಸ. ಪ್ರಜಾಪ್ರಭುತ್ವಕ್ಕೆ ಮಾರಕವಾದ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ. ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಒಂದು ಕೋಮಿನವರ ಮೇಲೆ ದಾಖಲಾದ ಕ್ರಿಮಿನಲ್ ಕೇಸ್ ವಾಪಸು ಪಡೆಯುವುದು ಅತ್ಯಂತ ಅಪಾಯಕಾರಿ. ನಿರ್ದಿಷ್ಟ  ಪ್ರಕರಣದಲ್ಲಿ ವಾಪಸ್ ಪಡೆದಿದ್ದರೆ ಒಪ್ಪಬಹುದಿತ್ತು.  ಒಂದು ಜಾತಿ, ಕೋಮಿಗೆ ಸೀಮಿತವಾಗಿ ಯೋಜನೆ ರೂಪಿಸುವ ಕೆಲಸ ಸಿದ್ದರಾಮಯ್ಯ ಮೊದಲಿನಿಂದಲೂ ಮಾಡುತ್ತಿದ್ದಾರೆ. ಪಿಎಫ್'ಐ, ಎಸ್'ಡಿಪಿಐ ಮೇಲಿನ ವಾಪಸು ಪಡೆದು ಕ್ರಿಮಿನಲ್'ಗಳಿಗೆ ಸಾಥ್ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಗಲಭೆಗೆ ಯಾರು ಕಾರಣ ಅನ್ನೋದು ಎಲ್ಲರಿಗೂ ಗೊತ್ತು. ಕಳಸಾ ಬಂಡೂರಿ ಹೋರಾಟಗಾರರ ಮೇಲಿನ ಕೇಸ್ ಹಾಗೆಯೇ  ಇವೆ. ರೈತರು ಇಂದಿಗೂ ಕೋರ್ಟ್'ಗೆ ಅಲೆಯುತ್ತಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ
ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು