ಚಾಮುಂಡೇಶ್ವರಿ ಕ್ಷೇತ್ರದಿಂದ ನಾನು ಗೆಲ್ಲಲ್ಲ ಅನ್ನಲು ಎಚ್'ಡಿಕೆ ಯಾರು? ಸಿಎಂ ಟಾಂಗ್

Published : Oct 26, 2017, 04:27 PM ISTUpdated : Apr 11, 2018, 12:57 PM IST
ಚಾಮುಂಡೇಶ್ವರಿ ಕ್ಷೇತ್ರದಿಂದ ನಾನು ಗೆಲ್ಲಲ್ಲ  ಅನ್ನಲು ಎಚ್'ಡಿಕೆ ಯಾರು? ಸಿಎಂ ಟಾಂಗ್

ಸಾರಾಂಶ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಗೆಲ್ಲಲ್ಲ ಅಂತ ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಲು ಅವರೇನು ಎರಡು ಲಕ್ಷ ಮತದಾರರನ್ನ ಜೇಬಲ್ಲಿ ಇಟ್ಟುಕೊಂಡಿದ್ದಾರಾ? ಎಂದು  ಸಿಎಂ ಸಿದ್ದರಾಮಯ್ಯ ಎಚ್'ಡಿಕೆಯನ್ನು ಪ್ರಶ್ನಿಸಿದ್ದಾರೆ.

ಬೆಂಗಳೂರು (ಅ.26):  ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಗೆಲ್ಲಲ್ಲ ಅಂತ ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಲು ಅವರೇನು ಎರಡು ಲಕ್ಷ ಮತದಾರರನ್ನ ಜೇಬಲ್ಲಿ ಇಟ್ಟುಕೊಂಡಿದ್ದಾರಾ? ಎಂದು  ಸಿಎಂ ಸಿದ್ದರಾಮಯ್ಯ ಎಚ್'ಡಿಕೆಯನ್ನು ಪ್ರಶ್ನಿಸಿದ್ದಾರೆ.

ಇಂದು ಸುದ್ದಿಗೋಷ್ಟಿ ನಡೆಸಿದ ಸಿಎಂ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಅಂತ ತೀರ್ಮಾನ ಮಾಡೋದು ಜನರೇ ವಿನಃ ಕುಮಾರಸ್ವಾಮಿ ಅಲ್ಲ.  ನನ್ನ ವೈರಿಗಳೆಲ್ಲ ಒಟ್ಟಾದರೂ ಕೂಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನೇ ಗೆಲ್ಲೋದು.  ಜನ ನನ್ನನ್ನ ಗೆಲ್ಲಿಸುತ್ತಾರೆ ಅಂತ ಆತ್ಮವಿಶ್ವಾಸದಿಂದ ಹೇಳಿದ್ದಾರೆ.

 ಇದೇ ವೇಳೆ ರಾಜ್ಯದಲ್ಲಿ ವಸತಿ ಅನುಷ್ಠಾನ ಕುರಿತು ಸಭೆ ನಡೆಸಿದ ವಿವರ ನೀಡಿದ ಸಿಎಂ, ಬೆಂಗಳೂರು ನಗರದಲ್ಲಿ ಬಡವರಿಗೆ ಒಂದು ಲಕ್ಷ ಮನೆಗಳ ನಿರ್ಮಾಣ ಮಾಡೋದಾಗಿ ಈ ವರ್ಷದ ಬಜೆಟ್ ನಲ್ಲಿ ಹೇಳಿದ್ದೆವು. ಅದಕ್ಕೆ ಒಂದು ಸಾವಿರ ಎಕರೆ ಜಮೀನು ಬೇಕಿದೆ. ಈ ಹಿನ್ನಲೆಯಲ್ಲಿ ಕಂದಾಯ ಇಲಾಖೆ ಅವರಿಗೆ ಹೇಳಿದ್ದೇನೆ 1,100 ಎಕರೆ ಜಮೀನು ಕೊಡಬೇಕು ಅಂತ ಸೂಚಿಸಿರೋದಾಗಿ ಸಿಎಂ ಹೇಳಿದರು.  ಬಡತನ ರೇಖೆಗಿಂತ ಕೆಳಗಿರುವವರು ಹಾಗೂ 5  ವರ್ಷಗಳಿಗಿಂತ ಹೆಚ್ಚು ಸಮಯದಿಂದ ಬೆಂಗಳೂರಿನಲ್ಲಿ ವಾಸ ಮಾಡುತ್ತಿರುವವರಿಗೆ ಮನೆ ನೀಡೋದಾಗಿಯೂ ಸಿಎಂ ಹೇಳಿದರು.

ಇದೇ ವೇಳೆ ಗುಜರಾತ್​ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಮೋದಿಯವರಿಗೆ ಅನುಕೂಲ ಮಾಡಿಕೊಡಲು ಈಗ ಫಿಕ್ಸ್ ಮಾಡಿದ್ದಾರೆ ಅಂತ ಆರೋಪಿಸಿದರು.  ಗುಜರಾತ್​ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಅಂತ ವಿಶ್ವಾಸ ವ್ಯಕ್ತಪಡಿಸಿದ ಸಿಎಂ, ನಮ್ಮ ರಾಜ್ಯದಲ್ಲಿ ನನ್ನ ನೇತೃತ್ವದಲ್ಲೇ ಚುನಾವಣೆ ಎದುರಿಸಲಿದ್ದೇವೆ ಎಂದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!