ಕಾವೇರಿ ಉಳಿಸಿಕೊಳ್ಳಲು ಸಿಎಂ ಕಸರತ್ತು

Published : Sep 22, 2016, 12:48 PM ISTUpdated : Apr 11, 2018, 12:57 PM IST
ಕಾವೇರಿ ಉಳಿಸಿಕೊಳ್ಳಲು ಸಿಎಂ ಕಸರತ್ತು

ಸಾರಾಂಶ

ಬೆಂಗಳೂರು (ಸೆ.22): ಕಾವೇರಿಯನ್ನು ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಬಿಡುವಿಲ್ಲದೇ ಸಂಚಾರ ಮಾಡುತ್ತಿದ್ದಾರೆ.

ಕಾವೇರಿ ನೀರು ಬಿಡುಗಡೆ ಕಗ್ಗಂಟಿನ ಬಗ್ಗೆ ಚರ್ಚಿಸಲು ಸಿಎಂ ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿ ವಿಶೇಷ ಅಧಿವೇಶನಕ್ಕೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ರಾಜ್ಯಪಾಲ ವಾಜುಬಾಯಿ ವಾಲಾ ಸಮ್ಮತಿ ಸೂಚಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಮುಖಂಡ ಎಸ್. ಎಂ ಕೃಷ್ಣರಿಂದಲೂ ಸಲಹೆ ನೀಡಿದ್ದಾರೆ. ಕಾವೇರಿಯಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬೇಡಿ. ಕಾವೇರಿ ಜಲಾನಯನ ಪ್ರದೇಶಗಳಲ್ಲಿರುವ ಅಣೆಕಟ್ಟುಗಳಲ್ಲಿ ಸಂಗ್ರಹವಾಗಿರುವ ಹೂಳು ಎತ್ತಿಸಿ. ಬೆಳೆ ಬೆಳೆಯಲಾಗದೆ ಅಸಹಾಯಕರಾದ ರೈತರಿಗೆ ಸೂಕ್ತ ಪರಿಹಾರ ನೀಡಿ ಎಂದು ಕೃಷ್ಣಾರವರು ಹೇಳಿದ್ದಾರೆ.

ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ ಬಿಜೆಪಿ ನಿನ್ನೆ ಸಭೆಗೆ ಹಾಜರಾಗದೇ ಇದ್ದುದು ಚರ್ಚಿತ ವಿಷಯವಾಗಿತ್ತು. ಇಂದು ದೇವೆಗೌಡರು ಯಡಿಯೂರಪ್ಪನವರಿಗೆ ಕರೆ ಮಾಡಿ ಕಾವೇರಿ ವಿಚಾರದಲ್ಲಿ ಐಕ್ಯತೆ ಮೆರೆಯಬೇಕು ಎಂದು ಹೇಳಿದ್ದಾರೆ. ಆ ಬಳಿಕ ಬಿಎಸ್ ವೈ ಸಿಎಂಗೆ ಕರೆ ಮಾಡಿ ಸರ್ಕಾರದ ನಿಲುವನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ