
ಬೆಂಗಳೂರು(ಜು.12):ಮಹದಾಯಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ನಮ್ಮ ನಮ್ಮಲ್ಲೇ ಚರ್ಚಿಸಿ ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಕುರಿತು ಚರ್ಚಿಸಲು ದಿನಾಂಕ ನಿಗದಿಪಡಿಸುವಂತೆ ಸಿದ್ದರಾಮಯ್ಯ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ಗೆ ಪತ್ರ ಬರೆದಿದ್ದಾರೆ.
ಈ ಹಿಂದೆ ಮೇ 5 ರಂದು ಸಿದ್ದರಾಮಯ್ಯ ಪತ್ರ ಬರೆದಿದ್ದರು. ಅದಕ್ಕೆ ಜುಲೈ 7 ರಂದು ಮಹಾ ಸಿಎಂ ಪತ್ರ ಬರೆದು, ಸಮಸ್ಯೆ ಇತ್ಯರ್ಥಕ್ಕೆ ತೋರಿಸಿದ ಆಸಕ್ತಿ ಬಗ್ಗೆ ಅಭಿನಂದನೆ ಸಲ್ಲಿಸಿದ್ರು. ಇದೀಗ ಆ ಅಭಿನಂದನೆಗೆ ಪತ್ರ ಬರೆಯುವ ಮೂಲಕ ಗೋವಾ ಸಿಎಂ ಮತ್ತು ತಾವು ಮಹದಾಯಿ ಕುರಿತಂತೆ ಸಭೆ ದಿನಾಂಕ ನಿಗದಿ ಪಡಿಸಿ, ಆ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.