
ಬೆಂಗಳೂರು (ಜ.26): ಅಲ್ಪ ಸಂಖ್ಯಾತರ ಮೇಲಿನ ಕೇಸ್ ವಾಪಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನಾವು ಎಲ್ಲರ ಕೇಸನ್ನೂ ವಾಪಸ್ ತೆಗೆದುಕೊಳ್ಳುತ್ತೇವೆ. ಹಿಂದೆ ರೈತರ ಕೇಸ್ ವಾಪಸ್ ತೆಗೆದುಕೊಂಡಿದ್ದೇವೆ. ರೈತರೆಲ್ಲಾ ಹಿಂದೂಗಳಲ್ಲವಾ? ರೈತರು, ಮುಸಲ್ಮಾನರು, ಹಿಂದೂಗಳು ಎಲ್ಲರ ಮೇಲಿನ ಕೇಸ್ ಗಳನ್ನೂ ವಾಪಸ್ ಪಡೆಯುತ್ತೇವೆ ಎಂದು ಸಿಎಂ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂತ ಹೇಳಿ ನಾವು ಜನದ್ರೋಹದ ಕೆಲಸ ಮಾಡಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಂದರೆ 130 ಕೋಟಿ ಜನರಿಗೂ ಅಭಿವೃದ್ಧಿ ಮಾಡೋದು, ಪ್ರೀತಿಸೋದು ಎಂದರ್ಥ. ರೈತರ ಕೇಸ್'ಗಳನ್ನು, ಅಲ್ಪಸಂಖ್ಯಾತರ ಕೇಸ್'ಗಳನ್ನೂ ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸಿಎಂ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಅಮಿತ್ ಶಾ ಗೆ ಬ್ರೈನ್ ಇಲ್ಲ. ಅಮಿತ್ ಶಾ ಬ್ರೈನ್'ಲೆಸ್ ಮ್ಯಾನ್ ಎಂದು ವ್ಯಂಗ್ಯವಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.