ವರುಣಾ ಕ್ಷೇತ್ರದಿಂದ ಸಿಎಂ ಪುತ್ರ ಯತೀಂದ್ರ ಸ್ಫರ್ಧೆ?

Published : Apr 21, 2017, 06:42 AM ISTUpdated : Apr 11, 2018, 12:57 PM IST
ವರುಣಾ ಕ್ಷೇತ್ರದಿಂದ ಸಿಎಂ ಪುತ್ರ ಯತೀಂದ್ರ ಸ್ಫರ್ಧೆ?

ಸಾರಾಂಶ

ವಾಸ್ತವವಾಗಿ ತಮ್ಮ ಮೊದಲ ಪುತ್ರ ರಾಕೇಶ್‌ ಅವರನ್ನು ಕಣಕ್ಕೆ ಇಳಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಹೊಣೆಗಾರಿಕೆಯನ್ನು ರಾಕೇಶ್‌ಗೆ ನೀಡಿದ್ದರು. ಆದರೆ, ರಾಕೇಶ್‌ ಅಕಾಲಿಕ ಸಾವಿನಿಂದ ಪರಿಸ್ಥಿತಿ ಬದಲಾಯಿತು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಎರಡನೇ ಪುತ್ರ ಡಾ| ಯತೀಂದ್ರ ಅವರಿಗೆ ಟಿಕೆಟ್‌ ಕೊಡಿಸುವುದು ಬಹುತೇಕ ಖಚಿತ ಎಂದು ಸಿಎಂ ಆಪ್ತ ಮೂಲಗಳು ಹೇಳುತ್ತವೆ. ಈ ಕಾರಣಕ್ಕಾಗಿಯೇ ಅವರು ಕಳೆದ ಬಾರಿ ತಾವು ಸ್ಪರ್ಧಿಸಿದ್ದ ವರುಣಾ ಕ್ಷೇತ್ರವನ್ನು ಬಿಟ್ಟು ತಮ್ಮ ಹಳೆಯ ಕ್ಷೇತ್ರವಾದ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಲಸೆ ಹೋಗಲಿದ್ದಾರೆ. ವರುಣಾ ಕ್ಷೇತ್ರದಲ್ಲಿ ಡಾ| ಯತೀಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮೂಲಗಳು ಹೇಳುತ್ತವೆ.

ವಾಸ್ತವವಾಗಿ ತಮ್ಮ ಮೊದಲ ಪುತ್ರ ರಾಕೇಶ್‌ ಅವರನ್ನು ಕಣಕ್ಕೆ ಇಳಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಹೊಣೆಗಾರಿಕೆಯನ್ನು ರಾಕೇಶ್‌ಗೆ ನೀಡಿದ್ದರು. ಆದರೆ, ರಾಕೇಶ್‌ ಅಕಾಲಿಕ ಸಾವಿನಿಂದ ಪರಿಸ್ಥಿತಿ ಬದಲಾಯಿತು. ಈ ಘಟನೆಯವರೆಗೂ ರಾಜಕೀಯದಿಂದ ದೂರವಿದ್ದ ಡಾ| ಯತೀಂದ್ರ, ಕೆಲ ತಿಂಗಳಿನಿಂದ ಕ್ರಮೇಣ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳತೊಡಗಿದರು. ಈಗ ರಾಕೇಶ್‌ ನಿರ್ವಹಿಸುತ್ತಿದ್ದ ಹೊಣೆಗಾರಿಕೆಯನ್ನು ಯತೀಂದ್ರ ನಿರ್ವಹಿಸುತ್ತಿದ್ದು, ಮೈಸೂರಿನ ವ್ಯವಹಾರಗಳನ್ನು ಯತೀಂದ್ರ ನೋಡಿಕೊಳ್ಳುತ್ತಿದ್ದಾರೆ ಎನ್ನುತ್ತವೆ ಸಿಎಂ ಆಪ್ತ ಮೂಲಗಳು.

ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಗುಂಡ್ಲುಪೇಟೆ ಕ್ಷೇತ್ರದ ಪ್ರಚಾರದ ಹೊಣೆಗಾರಿಕೆಯನ್ನು ಸಂಪೂರ್ಣವಾಗಿ ಯತೀಂದ್ರ ಅವರು ನಿರ್ವಹಿಸಿದ್ದರು. ತಮ್ಮ ಸ್ನೇಹಿತರ ತಂಡದೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ತನ್ಮೂಲಕ ಯತೀಂದ್ರ ಅವರು ರಾಜಕೀಯ ಆಸಕ್ತಿ ಬೆಳೆಸಿಕೊಂಡಿರುವುದು ಸ್ಪಷ್ಟ. ಸಿಎಂ ಆಪ್ತ ಮೂಲಗಳ ಪ್ರಕಾರ ಮುಂದಿನ ಚುನಾವಣೆಗೆ ಯತೀಂದ್ರ ಅವರಿಗೆ ಟಿಕೆಟ್‌ ಕೊಡಿಸುವ ಪ್ರಯ​ತ್ನ​ವನ್ನು ಸಿಎಂ ಈಗಾಗಲೇ ಆರಂಭಿ​ಸಿದ್ದಾರೆ. ಹೈಕಮಾಂಡ್‌ನ ಕೆಲ ವರಿಷ್ಠರ ಬಳಿ ವರುಣಾ ಕ್ಷೇತ್ರದಿಂದ ತಮ್ಮ ಪುತ್ರನನ್ನು ಕಣಕ್ಕೆ ಇಳಿಸುವ ಬಯಕೆಯನ್ನು ಅರುಹಿಕೊಂಡಿದ್ದು, ಇದಕ್ಕೆ ಗ್ರೀನ್‌ ಸಿಗ್ನಲ್‌ ದೊರಕಿದೆ ಎಂದು ಮೂಲಗಳು ಹೇಳುತ್ತವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!