
ನವದೆಹಲಿ(ಏ.15): ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯದ ಮಾಜಿ ಗುರು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರಿಗೆ ಹತ್ತಿರವಾಗತೊಡಗಿದ್ದಾರೆ.
ನವದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್'ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಹಾಗೂ ಬೆಂಗಳೂರು ಐಟಿ ಸಿಟಿಯ ಆರಂಭದ ಬಗ್ಗೆ ವರದಿಗಾರರು ಪ್ರಶ್ನಿಸಿದಾಗ 'ನಗರದಲ್ಲಿ ಐಟಿ ಹಬ್ ಆರಂಭವಾಗಿದ್ದು ಎಸ್'ಎಂ.ಕೃಷ್ಣರ ಕಾಲದಲ್ಲಿ ಅಲ್ಲ. ದೇವೇಗೌಡರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ. ಆದರೆ ಜನರಲ್ಲಿ ತಪ್ಪು ಕಲ್ಪನೆ ಇದೆ. ಎಲಿವೇಟೆಡ್ ರಸ್ತೆ ಕೂಡ ಗೌಡರ ಕಾಲದಲ್ಲೆ ಆರಂಭವಾಗಿದ್ದು. ಎಂದು ತಮ್ಮ ಮಾಜಿ ಗುರುವಿನ ಸಾಧನೆಯನ್ನು ನನಪಿಸಿಕೊಂಡು ಕೃಷ್ಣರನ್ನು ಪರೋಕ್ಷವಾಗಿ ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.