
ಬೆಂಗಳೂರು (ಡಿ.26): ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ, ಕಾಂಗ್ರೆಸ್ನಲ್ಲಿ ಉಂಟಾಗಿರೋ ಗೊಂದಲ ನಿವಾರಣೆಗೆ ಸಿಎಂ ಸಿದ್ದರಾಮಯ್ಯ ಎಂಟ್ರಿಯಾಗಿದ್ದಾರೆ.
ತಡರಾತ್ರಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅದ್ಯಕ್ಷ, ಶಾಮನೂರು ಶಿವಶಂಕರಪ್ಪನವರನ್ನು ಭೇಟಿಯಾದ ಸಿಎಂ. ಶಾಮನೂರು ಜೊತೆ ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯ ಸಾಧನಾ ಸಮಾವೇಶ ಕಾರ್ಯಕ್ಕೆ ಆಗಮಿಸಿ, ನಗರದ ಬಾಪೂಜಿ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ. ತೋಟಗಾರಿಕಾ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಶಾಮನೂರು ಶಿವಶಂಕರಪ್ಪನವರನ್ನು ಅವರ ಮನೆಯಲ್ಲಿ ಭೇಟಿ ಮಾಡಿದ್ದಾರೆ. ಶಾಮನೂರು ಶಿವಶಂಕರಪ್ಪನವರ ಜೊತೆ ವೀರಶೈವ ಲಿಂಗಾಯತ ಧರ್ಮದ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಸ್ವತಂತ್ರ ಧರ್ಮದ ವಿಚಾರವಾಗಿ ನಡೆಯುತ್ತಿರುವ ಧರ್ಮ ಸಂಘರ್ಷದಲ್ಲಿ, ಸಿಎಂ ವಿರುದ್ಧ ಕಳೆದ ಕೆಲದಿನಗಳ ಹಿಂದೆ ಶಾಮನೂರು ಶಿವಶಂಕರಪ್ಪ ಬೇಜಾರಾಗಿದ್ದರು. ಈ ಹಿನ್ನಲೆ ದಾವಣಗೆರೆಯಲ್ಲಿ ವಾಸ್ತವ್ಯ ಹೂಡಿದ ಸಿಎಂ, ಗೌಪ್ಯವಾಗಿ ಶಾಮನೂರು ಶಿವಶಂಕರಪ್ಪನವರ ಜೊತೆ ಚರ್ಚಿಸಿದ್ದಾರೆ. ಆದರೆ ಯಾವ ವಿಚಾರಗಳು ಚರ್ಚೆಯಾಗಿವೆ, ಸ್ವತಂತ್ರ ಧರ್ಮದ ವಿಚಾರವಾಗಿ ಶಾಮನೂರು ನಿಲುವು ಏನು, ಸರ್ಕಾರ ರಚನೆ ಮಾಡಿರುವ ಅಲ್ಪಸಂಖ್ಯಾತ ಆಯೋಗ ಸಮಿತಿ ಬಗ್ಗೆ, ಶಾಮನೂರು ಪ್ರತಿಕ್ರಿಯೆ ಏನು ಎಂಬುದು ತಿಳಿಯಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.